Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:9 - ಪರಿಶುದ್ದ ಬೈಬಲ್‌

9 “ಬಳಿಕ ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವೆನು. ನಾನು ನಿಮ್ಮೊಡನೆ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:9
31 ತಿಳಿವುಗಳ ಹೋಲಿಕೆ  

ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.


ನಾನು ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವೆನು. ಮತ್ತು ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.


ಅವರ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡಿದೆ. ಅವರ ಪೂರ್ವಿಕರಿಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ತಂದೆ. ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು.


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.


‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.


“ನಿಮ್ಮ ದೇವರಾದ ಯೆಹೋವನು ನಿಮಗೆ ಒಳ್ಳೆಯ ವಸ್ತುಗಳನ್ನು ಕೊಡುವನು; ನಿಮಗೆ ಹೆಚ್ಚು ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಪಶುಗಳು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶದಲ್ಲಿ ನಿಮ್ಮ ಹೊಲವು ಒಳ್ಳೆಯ ಬೆಳೆಗಳನ್ನು ಫಲಿಸುತ್ತದೆ.


ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.


ಆತನು ಹೇಳಿದ್ದೇನೆಂದರೆ: “ನಾನು ಆರಿಸಿಕೊಂಡ ರಾಜನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ನನ್ನ ಸೇವಕನಾದ ದಾವೀದನಿಗೆ ಒಂದು ವಾಗ್ದಾನವನ್ನು ಮಾಡಿದೆನು; ಅದೇನೆಂದರೆ,


ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ಹೊಲಗಳನ್ನು ಆಶೀರ್ವದಿಸಿ ಒಳ್ಳೆಯ ಬೆಳೆಯನ್ನು ಅನುಗ್ರಹಿಸುವನು. ನಿಮ್ಮ ಪಶುಪ್ರಾಣಿಗಳನ್ನು ಆಶೀರ್ವದಿಸಿ ಅವು ಹೆಚ್ಚು ಮರಿಗಳನ್ನು ಈಯುವಂತೆ ಮಾಡುವನು. ಆತನು ನಿಮ್ಮ ಎಲ್ಲಾ ದನಕರು, ಕುರಿಮರಿಗಳನ್ನು ಆಶೀರ್ವದಿಸುವನು.


ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.


ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು.


ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ನಾನು ನಿನ್ನ ಸಂತಾನವನ್ನು ಆಕಾಶದಲ್ಲಿನ ನಕ್ಷತ್ರಗಳಷ್ಟು ಹೆಚ್ಚಿಸಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳವರು ನಿನ್ನ ಸಂತತಿಯಿಂದ ಆಶೀರ್ವಾದ ಹೊಂದುವರು.


“ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು.


ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನೆಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.


ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.


ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.


ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.


ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು.


ನೀವು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗದಿದ್ದರೆ, ಆಗ ನೀವು ನನ್ನ ಒಡಂಬಡಿಕೆಯನ್ನು ಮುರಿದವರಾಗುತ್ತೀರಿ.


ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.


ನಾನು ನಿನ್ನೊಂದಿಗಿದ್ದು ಸಹಾಯಮಾಡುತ್ತೇನೆ. ಜನರು ನಿನ್ನ ನೆಲವನ್ನು ಉಳುವರು; ಬೀಜವನ್ನು ಬಿತ್ತುವರು.


ನಿನ್ನ ಸೇವಕನಾದ ನಾನು, ನೀನೇ ಆರಿಸಿಕೊಂಡಿರುವ ಜನರ ನಡುವೆ ಇದ್ದೇನೆ. ಇಲ್ಲಿ ಅನೇಕಾನೇಕ ಜನರಿದ್ದಾರೆ. ಅವರನ್ನು ಎಣಿಸಲಾಗದು, ಒಬ್ಬ ಆಡಳಿತಗಾರನು ಅವರ ಮಧ್ಯದಲ್ಲಿದ್ದು ಅನೇಕ ತೀರ್ಪುಗಳನ್ನು ಮಾಡಬೇಕಾಗುತ್ತದೆ.


“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.


ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು