Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:21 - ಪರಿಶುದ್ದ ಬೈಬಲ್‌

21 ಅವನು ಭೂಮಿಯನ್ನು ಹಿಂದಕ್ಕೆ ಕೊಂಡುಕೊಳ್ಳದಿದ್ದರೆ, ಅದು ಜ್ಯೂಬಿಲಿ ಸಂವತ್ಸರದಲ್ಲಿ ಯೆಹೋವನಿಗೆ ಮೀಸಲಾದದ್ದಾಗಿರುವುದು. ಅದು ಎಂದೆಂದಿಗೂ ಯಾಜಕನದ್ದಾಗಿರುವುದು. ಅದು ಪೂರ್ಣವಾಗಿ ಯೆಹೋವನಿಗೆ ಪ್ರತಿಷ್ಠಿಸಿದ ಭೂಮಿಯಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲ ಸರ್ವೇಶ್ವರನ ಸ್ವಕೀಯ ಹೊಲವಾದಂತೆ ಅವರ ಸೊತ್ತಾಗಿಯೇ ಇರಬೇಕು. ಅದು ಯಾಜಕರ ವಶದಲ್ಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನ ಸ್ವಕೀಯವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:21
11 ತಿಳಿವುಗಳ ಹೋಲಿಕೆ  

ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು.


“ಇಸ್ರೇಲರು ಯೆಹೋವನಿಗೆ ಹರಕೆ ಹೊತ್ತುಕೊಂಡು ಕೊಡುವ ಪ್ರತಿಯೊಂದೂ ನಿಮ್ಮದಾಗಿದೆ.


ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.


ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ಮತ್ತೆ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.


ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.


ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.


ಈ ನಗರ ಮತ್ತು ಇದರಲ್ಲಿರುವದೆಲ್ಲವೂ ಯೆಹೋವನ ಸ್ವತ್ತಾಗಿದೆ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಮನೆಯಲ್ಲಿರುವ ಎಲ್ಲ ಜನರು ಮಾತ್ರ ಜೀವಸಹಿತ ಉಳಿಯಲಿ, ಅವರನ್ನು ಕೊಲ್ಲಬಾರದು. ಏಕೆಂದರೆ ರಾಹಾಬಳು ನಮ್ಮ ಆ ಇಬ್ಬರು ಗೂಢಚಾರರಿಗೆ ಸಹಾಯ ಮಾಡಿದ್ದಾಳೆ.


ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.


ಅವನು ಹೊಲವನ್ನು ಮರಳಿ ಕೊಂಡುಕೊಳ್ಳದಿದ್ದರೆ ಅದು ಯಾವಾಗಲೂ ಯಾಜಕರುಗಳಿಗೆ ಸೇರಿದ್ದಾಗಿರುತ್ತದೆ. ಭೂಮಿಯು ಮತ್ತೊಬ್ಬನಿಗೆ ಮಾರಲ್ಪಟ್ಟಿದ್ದರೆ, ಮೊದಲನೆಯ ವ್ಯಕ್ತಿಯು ಅದನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ.


“ಒಬ್ಬನು ತಾನು ಕೊಂಡುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಪ್ರತಿಷ್ಠಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು