Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:30 - ಪರಿಶುದ್ದ ಬೈಬಲ್‌

30 “ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೊಲದ ಬೆಳೆಯಾಗಲಿ ತೋಟದ ಹಣ್ಣುಗಳಾಗಲಿ ಭೂವಿುಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಪಾಲು ಯೆಹೋವನದಾಗಿರಬೇಕು; ಅದು ಯೆಹೋವನಿಗೆ ಮೀಸಲಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:30
22 ತಿಳಿವುಗಳ ಹೋಲಿಕೆ  

ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.


ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು.


ನಾನಾದರೋ ವಾರದಲ್ಲಿ ಎರಡಾವರ್ತಿ ಉಪವಾಸ ಮಾಡುತ್ತೇನೆ. ಸಂಪಾದಿಸುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ನಿನಗೆ ಕೊಡುತ್ತೇನೆ!’ ಅಂದನು.


ಆ ಬಳಿಕ ದೇವರಿಗೆ ಕೊಟ್ಟಿದ್ದ ದಶಮಾಂಶ ಮತ್ತು ಬೇರೆ ಕಾಣಿಕೆಗಳನ್ನು ಆ ಉಗ್ರಾಣದ ಕೋಣೆಗಳಲ್ಲಿ ಕೂಡಿಸಿಟ್ಟರು. ಲೇವಿಯನಾದ ಕೋನನ್ಯನು ಇದರ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟನು. ಇವನಿಗೆ ಸಹಾಯಕನಾಗಿ ಕೋನನ್ಯನ ಸೋದರನಾದ ಶಿಮ್ಮಿಯು ನೇಮಿಸಲ್ಪಟ್ಟನು.


ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.


“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.


ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.


ಆ ವಿಶೇಷ ಬಗೆಯ ಕಾಣಿಕೆಯು ಒಬ್ಬ ವ್ಯಕ್ತಿಯಾಗಿದ್ದರೆ ಅವನನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆ ವ್ಯಕ್ತಿಯು ಕೊಲ್ಲಲ್ಪಡಬೇಕು.


ಆದ್ದರಿಂದ ಒಬ್ಬನು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಮರಳಿ ಪಡೆದುಕೊಳ್ಳಬೇಕೆಂದಿದ್ದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿಕೊಟ್ಟು ಮರಳಿ ಕೊಂಡುಕೊಳ್ಳಬೇಕು.


ಆ ಲೇವಿಯನು ಇತರ ಲೇವಿಯರೊಂದಿಗೆ ಸಮಾನ ಪಾಲನ್ನು ಹೊಂದುವನು. ಇದಲ್ಲದೆ ಅವನ ಕುಟುಂಬದವರು ಯಥಾಪ್ರಕಾರ ತಮಗೆ ಬರತಕ್ಕ ಪಾಲನ್ನೂ ಹೊಂದುವರು.


“ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.


ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.


ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು