Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:31 - ಪರಿಶುದ್ದ ಬೈಬಲ್‌

31 ಆದ್ದರಿಂದ ಒಬ್ಬನು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಮರಳಿ ಪಡೆದುಕೊಳ್ಳಬೇಕೆಂದಿದ್ದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿಕೊಟ್ಟು ಮರಳಿ ಕೊಂಡುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯಾವನಾದರು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಮೌಲ್ಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:31
5 ತಿಳಿವುಗಳ ಹೋಲಿಕೆ  

“ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.


“ದನಗಳಲ್ಲಾಗಲಿ ಕುರಿಗಳಲ್ಲಾಗಲಿ ಪ್ರತಿ ಹತ್ತನೆಯ ಪಾಲನ್ನು ಯಾಜಕರು ತೆಗೆದುಕೊಳ್ಳುವರು. ಪ್ರತಿ ಹತ್ತನೆ ಪಶು ಯೆಹೋವನದಾಗಿರುವುದು.


ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತೆರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಈ ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಜನರು ಚೊಚ್ಚಲಾದ ಪಶುಗಳನ್ನು ಯೆಹೋವನಿಗೆ ಕೊಡಬೇಕು. ಆದರೆ ಚೊಚ್ಚಲಾದ ಪಶುವು ಅಶುದ್ಧವಾದ ಪಶುವಾಗಿದ್ದರೆ, ಆಗ ಹರಕೆ ಮಾಡಿದವನು ಅದನ್ನು ಮರಳಿ ಕೊಂಡುಕೊಳ್ಳಬೇಕು. ಯಾಜಕನು ಅದರ ಬೆಲೆಯನ್ನು ನಿರ್ಣಯಿಸುವನು ಮತ್ತು ಹರಕೆ ಮಾಡಿದವನು ಆ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಬೇಕು. ಅವನು ಅದನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಯಾಜಕನು ತಾನು ನಿರ್ಣಯಿಸಿದ ಬೆಲೆಗೆ ಆ ಪಶುವನ್ನು ಮಾರಬೇಕು.


ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು