Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:1 - ಪರಿಶುದ್ದ ಬೈಬಲ್‌

1 “ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಹೆಣ್ಣಾಗಲಿ ಪೂರ್ಣಾಂಗವಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:1
29 ತಿಳಿವುಗಳ ಹೋಲಿಕೆ  

ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದದು ಯಾವುವೆಂದರೆ, ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರ್ಷದ ಹೆಣ್ಣು ಕುರಿಮರಿ, ಸಮಾಧಾನಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು ಇವೇ.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಈ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.


ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನ್ನೂರು ಕುರಿಗಳಲ್ಲಿ ಒಂದು ಕುರಿಯನ್ನು ಕೊಡಬೇಕು. “ಧಾನ್ಯನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನಯಜ್ಞಗಳಿಗೂ ಈ ಕಾಣಿಕೆಗಳನ್ನು ಕೊಡಬೇಕು. ಈ ಕಾಣಿಕೆಗಳು ಜನರನ್ನು ಶುದ್ಧಮಾಡುವವು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


“ಈ ದಿನ ನಾನು ಸಮಾಧಾನಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ.


ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.


ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಆಗ ಇಸ್ರೇಲಿನ ಜನರೆಲ್ಲರು ಬೇತೇಲಿಗೆ ಹೋದರು. ಅಲ್ಲಿ ಅವರು ಕುಳಿತುಕೊಂಡು ಯೆಹೋವನಿಗೆ ಮೊರೆಯಿಟ್ಟರು. ಅವರು ಸಾಯಂಕಾಲದವರೆಗೆ ಏನೂ ತಿನ್ನಲಿಲ್ಲ. ಇದಲ್ಲದೆ ಅವರು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಸಮಾಧಾನಯಜ್ಞರೂಪವಾಗಿ ಇದನ್ನು ಯೆಹೋವನಿಗೆ ಅರ್ಪಿಸುವ ಯಜ್ಞಕ್ಕೆ ಇದೇ ನಿಯಮ. ಇಸ್ರೇಲರು ಹೊಲಗಳಲ್ಲಿ ಕೊಲ್ಲುವ ತಮ್ಮ ಪ್ರಾಣಿಗಳನ್ನು ದೇವದರ್ಶನಗುಡಾರದ ಬಾಗಿಲಿಗೆ ಅಂದರೆ ಯೆಹೋವನ ಸನ್ನಿಧಿಯಲ್ಲಿರುವ ಯಾಜಕರ ಬಳಿಗೆ ತರಬೇಕು.


ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.


ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನಯಜ್ಞಗಳಾಗಿಯೂ ಅರ್ಪಿಸಿದರು.


“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಯೆಹೋವನಿಗೆ ಸಮಾಧಾನಯಜ್ಞವಾಗಿ ಕೊಡುವಾಗ, ಆ ಪಶುವಿನಲ್ಲಿ ಯಾವ ದೋಷವೂ ಇರಬಾರದು. ಅದು ಗಂಡು ಅಥವಾ ಹೆಣ್ಣಾಗಿರಬಹುದು.


ಆರೋನನು ಜನರಿಗಾಗಿ ಸಮಾಧಾನಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ಅವುಗಳ ರಕ್ತವನ್ನು ಅವನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು.


“ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನಯಜ್ಞವನ್ನಾಗಲಿ ಅರ್ಪಿಸುವವನು


ನಿಮ್ಮ ದೇವರಾದ ಯೆಹೋವನ ಯಜ್ಞವೇದಿಕೆಯ ಮೇಲೆ ನಿಮ್ಮ ಸರ್ವಾಂಗಹೋಮದ ಪಶುವಿನ ಮಾಂಸವನ್ನು ಮತ್ತು ರಕ್ತವನ್ನು ಸಮರ್ಪಿಸಬೇಕು. ನಿಮ್ಮ ಯಜ್ಞಗಳಲ್ಲಿ ರಕ್ತವನ್ನು ಬಲಿಪೀಠದಲ್ಲಿ ಸುರಿದು ಮಾಂಸವನ್ನು ನೀವು ತಿನ್ನಬಹುದು.


ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ಈ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು