Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:17 - ಪರಿಶುದ್ದ ಬೈಬಲ್‌

17 ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:17
42 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಆಜ್ಞಾಪಿಸುವುದೇನೆಂದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಕೂಡದು.


ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.


ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.


“ಇಸ್ರೇಲರಿಗೆ ಹೀಗೆ ಹೇಳು: ನೀವು ದನಗಳ, ಕುರಿಗಳ ಅಥವಾ ಹೋತಗಳ ಕೊಬ್ಬನ್ನು ತಿನ್ನಬಾರದು.


ಆದರೆ ಅದರ ರಕ್ತವನ್ನು ಮಾತ್ರ ತಿನ್ನಬಾರದು. ಅದರ ರಕ್ತವನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.


ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.


ಆರೋನನ ವಂಶದವರಾದ ಗಂಡಸರೆಲ್ಲರೂ ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳನ್ನು ತಿನ್ನಬಹುದು. ಇದು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿದೆ. ಈ ಕಾಣಿಕೆಗಳಿಗೆ ತಗಲಿದ್ದೆಲ್ಲಾ ಪವಿತ್ರವಾಗುತ್ತವೆ.”


ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ.


ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ.


ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.


ಆತನು ನಿರ್ಮಿಸಿದ ಪ್ರತಿಯೊಂದೂ ಉತ್ತಮವಾಗಿರುತ್ತದೆ. ಆತನಿಗೆ ಕೃತಜ್ಞತಾಸ್ತುತಿ ಮಾಡಿ ತೆಗೆದುಕೊಳ್ಳುವ ಯಾವುದನ್ನೇ ಆಗಲಿ ನಿಷಿದ್ಧವೆಂದು ತಿರಸ್ಕರಿಸಬಾರದು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.


“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.


ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಮತ್ತು ಆ ನೀರನ್ನು ಯಾವನಾದರೂ ಮುಟ್ಟಿದರೆ, ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಇಸ್ರೇಲರನ್ನು ಶುದ್ಧೀಕರಿಸುವ ಕಟ್ಟಳೆ ಶಾಶ್ವತವಾದದ್ದು. ನೀವು ಆ ಕಾರ್ಯಗಳನ್ನು ವರ್ಷಕ್ಕೊಮ್ಮೆ ಇಸ್ರೇಲರ ಪಾಪಗಳ ದೆಸೆಯಿಂದ ಮಾಡಬೇಕು.” ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆ ಕಾರ್ಯಗಳನ್ನು ಮಾಡಿದರು.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


ಯೆಹೋವನು ಮೋಶೆಯೊಡನೆ ಮಾತನಾಡಿ ಹೇಳಿದ್ದೇನೆಂದರೆ:


“ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆ ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು.


ನೈವೇದ್ಯರೂಪವಾಗಿ ನಿವಾಳಿಸುವ ಸಮರ್ಪಣೆಯಲ್ಲಿ ಪಶುವಿನ ಎದೆಯ ಭಾಗವನ್ನು ಮತ್ತು ಸಮಾಧಾನಯಜ್ಞಗಳಲ್ಲಿ ಪಶುವಿನ ಬಲ ತೊಡೆಯನ್ನು ಯೆಹೋವನಾದ ನಾನು ಇಸ್ರೇಲರಿಂದ ತೆಗೆದುಕೊಂಡು ಆರೋನನಿಗೂ ಅವನ ಪುತ್ರರಿಗೂ ಕೊಡುತ್ತಿದ್ದೇನೆ. ಇಸ್ರೇಲರು ಈ ನಿಯಮಕ್ಕೆ ಎಂದೆಂದಿಗೂ ವಿಧೇಯರಾಗಬೇಕು.”


“ನೀನು ಮತ್ತು ನಿನ್ನ ಪುತ್ರರು ದೇವದರ್ಶನದ ಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಈ ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ.


ಜನರು ಪ್ರಾಣಿಗಳ ಕೊಬ್ಬನ್ನು ಅಗ್ನಿಯ ಮೂಲಕ ಹೋಮಮಾಡುವಾಗ, ಯಾಜಕರಿಗಾಗಿ ತೆಗೆದಿಟ್ಟ ತೊಡೆಯ ಭಾಗವನ್ನು ಮತ್ತು ನೈವೇದ್ಯವಾಗಿ ನಿವಾಳಿಸಬೇಕಾದ ಎದೆಯ ಭಾಗವನ್ನು ಯೆಹೋವನ ಸನ್ನಿಧಿಗೆ ತರಬೇಕು. ಅದು ನಿಮ್ಮ ಪಾಲಾಗಿರುವುದು. ಅದು ನಿನಗೂ ನಿನ್ನ ಮಕ್ಕಳಿಗೂ ಸೇರಿದ್ದು. ಯೆಹೋವನು ಆಜ್ಞಾಪಿಸಿದಂತೆ ಯಜ್ಞಗಳ ಆ ಭಾಗವು ಎಂದೆಂದೂ ನಿಮ್ಮ ಪಾಲಾಗಿರುತ್ತದೆ” ಎಂದು ಹೇಳಿದನು.


“ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.


ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು.


ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ದೀಪಗಳು ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸುವನು. ಇದು ತೆರೆಯ ಹೊರಗೆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಇರುವುದು. ಈ ನಿಯಮ ಶಾಶ್ವತವಾದದ್ದು.


ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”


ಯಾಜಕನು ಧಾನ್ಯನೈವೇದ್ಯದಿಂದ ಒಂದು ಹಿಡಿ ಶ್ರೇಷ್ಠ ಹಿಟ್ಟನ್ನು ಮತ್ತು ಎಣ್ಣೆಯನ್ನು ಮತ್ತು ಎಲ್ಲಾ ಧೂಪವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಅದನ್ನು ವೇದಿಕೆಯ ಮೇಲೆ ಸುಡಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


“ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು. “ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು.


ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”


ರಕ್ತವನ್ನು ನೀರಿನಂತೆ ನೆಲದಲ್ಲಿ ಚೆಲ್ಲಿಬಿಡಬೇಕು.


ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು