Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:8 - ಪರಿಶುದ್ದ ಬೈಬಲ್‌

8 ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವದರ್ಶನದ ಗುಡಾರದ ಎದುರಿಗೆ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:8
17 ತಿಳಿವುಗಳ ಹೋಲಿಕೆ  

“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ನಾವು ಕ್ರಿಸ್ತನಲ್ಲಿರುವ ನಂಬಿಕೆಯ ಮೂಲಕ ದೇವರ ಬಳಿಗೆ ಸ್ವತಂತ್ರದಿಂದ ಮತ್ತು ನಿರ್ಭಯದಿಂದ ಹೋಗಲು ಸಾಧ್ಯವಾಯಿತು.


ಹೌದು, ಕ್ರಿಸ್ತನ ಮೂಲಕ ನಾವೆಲ್ಲರೂ ಒಬ್ಬ ಆತ್ಮನಿಂದ ನಮ್ಮ ತಂದೆಯಾದ ದೇವರ ಬಳಿಗೆ ಬರಲು ಶಕ್ತರಾಗಿದ್ದೇವೆ.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಅಂದರೆ, ದೇವರು ಕ್ರಿಸ್ತನಲ್ಲಿ ಇಡೀ ಜಗತ್ತನ್ನೇ ತನ್ನೊಂದಿಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನು. ದೇವರು ಕ್ರಿಸ್ತನಲ್ಲಿ ಜನರ ಅಪರಾಧಗಳನ್ನು ಪರಿಗಣಿಸುವುದಿಲ್ಲ. ಈ ಸಮಾಧಾನದ ಸಂದೇಶವನ್ನು ಜನರಿಗೆ ತಿಳಿಸುವ ಕೆಲಸವನ್ನು ದೇವರು ನಮಗೆ ಕೊಟ್ಟಿದ್ದಾನೆ.


ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.


ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು.


ಅಭಿಷಿಕ್ತನಾದ ಯಾಜಕನು ಹೋರಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಅವನು ತನ್ನ ಕೈಯನ್ನು ಆಡಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ಬಳಿಕ ಆರೋನನ ಗಂಡುಮಕ್ಕಳು ಆಡಿನ ರಕ್ತವನ್ನು ವೇದಿಕೆಯ ಮೇಲೆ ಅದರ ಸುತ್ತಲೂ ಚಿಮಿಕಿಸಬೇಕು.


ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು