Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:15 - ಪರಿಶುದ್ದ ಬೈಬಲ್‌

15 ಜನರ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ತರುವಾಯ ಒಬ್ಬನು ಯೆಹೋವನ ಸನ್ನಿಧಿಯಲ್ಲಿ ಹೋರಿಯನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಮೂಹದ ಹಿರಿಯರು ಯೆಹೋವನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:15
16 ತಿಳಿವುಗಳ ಹೋಲಿಕೆ  

ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.


ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.


ನೀನು ಲೇವಿಯರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದಾಗ ಇಸ್ರೇಲರು ತಮ್ಮ ಕೈಗಳನ್ನು ಅವರ ತಲೆಯ ಮೇಲಿಡುವರು.


ಆರೋನನು ಸಜೀವವಾದ ಹೋತದ ತಲೆಯ ಮೇಲೆ ತನ್ನ ಎರಡು ಕೈಗಳನ್ನಿಟ್ಟು ಇಸ್ರೇಲರು ಮಾಡಿದ ಪಾಪಗಳನ್ನು ಮತ್ತು ದ್ರೋಹಗಳನ್ನು ಅರಿಕೆಮಾಡುವನು. ಹೀಗೆ ಆರೋನನು ಜನರ ಪಾಪಗಳನ್ನು ಹೋತದ ತಲೆಯ ಮೇಲೆ ಹೊರಿಸುವನು. ಬಳಿಕ ಅವನು ಹೋತವನ್ನು ಮರುಭೂಮಿಗೆ ಕಳುಹಿಸಿಬಿಡುವನು. ಒಬ್ಬ ಮನುಷ್ಯನು ಹೋತವನ್ನು ನಡಿಸಿಕೊಂಡು ಹೋಗಲು ಸಿದ್ಧನಾಗಿ ನಿಂತಿರುವನು.


ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.


ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.


ಅಭಿಷಿಕ್ತನಾದ ಯಾಜಕನು ಹೋರಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.


ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಬಳಿಕ ಅಭಿಷಿಕ್ತನಾದ ಯಾಜಕನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗೆ ಹೋಗಬೇಕು.


ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.


“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ.


ಆ ಬಳಿಕ ಯಾಜಕರು ಹೋತಗಳನ್ನು ಅರಸನ ಮತ್ತು ಸೇರಿಬಂದ ಜನಗಳ ಮುಂದೆ ಪಾಪಪರಿಹಾರಕ ಯಜ್ಞಕ್ಕಾಗಿ ತಂದರು. ಯಾಜಕರು ಅವುಗಳ ಮೇಲೆ ಕೈಯಿಟ್ಟು ವಧಿಸಿದರು. ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಪಾಪಪರಿಹಾರಕ ಯಜ್ಞವಾಗಿ ಸಮರ್ಪಿಸಿದರು. ದೇವರು ಇಸ್ರೇಲರ ಪಾಪಗಳನ್ನು ಕ್ಷಮಿಸುವಂತೆ ಅವರು ಹೀಗೆ ಮಾಡಿದರು. ಸರ್ವಾಂಗಹೋಮಗಳನ್ನೂ ಪಾಪಪರಿಹಾರಕ ಯಜ್ಞಗಳನ್ನೂ ಇಸ್ರೇಲಿನ ಸಮಸ್ತ ಜನರಿಗಾಗಿ ಅರ್ಪಿಸಬೇಕೆಂದು ರಾಜನು ಆಜ್ಞಾಪಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು