Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:32 - ಪರಿಶುದ್ದ ಬೈಬಲ್‌

32 “ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವನು ತನ್ನ ದೋಷಪರಿಹಾರಾರ್ಥವಾಗಿ ತರುವದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:32
19 ತಿಳಿವುಗಳ ಹೋಲಿಕೆ  

ಆ ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಆಡನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಞವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಆಡನ್ನು ತರಬೇಕು.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


“ಆತನು (ಕ್ರಿಸ್ತನು) ಪಾಪವನ್ನು ಮಾಡಲಿಲ್ಲ. ಆತನ ಬಾಯಿಂದ ಯಾವ ಸುಳ್ಳು ಮಾತೂ ಬರಲಿಲ್ಲ.”


ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.


ಸಮೀಪದಲ್ಲಿ ನಡೆದುಹೋಗುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕೆ ದೇವರು ನೇಮಿಸಿದ ಕುರಿಮರಿ!” ಎಂದು ಹೇಳಿದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.


ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.


ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು