Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:11 - ಪರಿಶುದ್ದ ಬೈಬಲ್‌

11 “ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:11
23 ತಿಳಿವುಗಳ ಹೋಲಿಕೆ  

ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಅವನು ಹಿಟ್ಟನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಒಂದು ಹಿಡಿಹಿಟ್ಟನ್ನು ಅದರಿಂದ ತೆಗೆದು ದೇವಾರ್ಪಿತವಾಯಿತೆಂದು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿರುವುದು. ಅದು ಪಾಪಪರಿಹಾರಕ ಸಮರ್ಪಣೆಯಾಗಿದೆ.


ಯಾಜಕನು ದೋಷಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


(ಅವರು ಮನ್ನವನ್ನು ಅಳೆಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.)


ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.


“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


“ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.


“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.


“ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕಿಗಾಗಿ ಪ್ರಾಯಶ್ಚಿತ್ತ ಮಾಡಬಹುದು. ಅವನು ಎಣ್ಣೆ ಬೆರೆಸಿದ ಮೂರು ಸೇರು ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು,


“ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು