Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:13 - ಪರಿಶುದ್ದ ಬೈಬಲ್‌

13 ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವದು. ನೈವೇದ್ಯದ್ರವ್ಯದಲ್ಲಿ ವಿುಕ್ಕದ್ದು ಹೇಗೆ ಯಾಜಕನಿಗೆ ಆಗುತ್ತದೋ ಇದರಲ್ಲಿಯೂ ವಿುಕ್ಕದ್ದು ಯಾಜಕನಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:13
16 ತಿಳಿವುಗಳ ಹೋಲಿಕೆ  

ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.


ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.


ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.


“ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು.


ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


“ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.


ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ಧಾನ್ಯನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ನೈವೇದ್ಯವು ಮಹಾಪರಿಶುದ್ಧವಾಗಿದೆ.


“ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.


ಈ ವಿಷಯಗಳಲ್ಲಿ ಯಾವುದಾದರೊಂದರಲ್ಲಿ ದೋಷಿಯಾದರೆ, ಅವನು ತನ್ನ ತಪ್ಪನ್ನು ಒಪ್ಪಿಕೊಂಡು ಅರಿಕೆ ಮಾಡಬೇಕು.


ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.


ಅವನು ಹಿಟ್ಟನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಒಂದು ಹಿಡಿಹಿಟ್ಟನ್ನು ಅದರಿಂದ ತೆಗೆದು ದೇವಾರ್ಪಿತವಾಯಿತೆಂದು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿರುವುದು. ಅದು ಪಾಪಪರಿಹಾರಕ ಸಮರ್ಪಣೆಯಾಗಿದೆ.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತೆರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಈ ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು