Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:15 - ಪರಿಶುದ್ದ ಬೈಬಲ್‌

15 “ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:15
33 ತಿಳಿವುಗಳ ಹೋಲಿಕೆ  

ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:


ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.


“ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.


“ದೋಷಪರಿಹಾರಕ ಯಜ್ಞದ ನಿಯಮಗಳು: ಅದು ಪವಿತ್ರವಾದದ್ದು.


ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.


“ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು.


ದಂಡವನ್ನು ತೆಗೆದುಕೊಳ್ಳತಕ್ಕವನು ತೀರಿಹೋಗಿ, ಹತ್ತಿರ ಸಂಬಂಧಿಯೂ ಇಲ್ಲದ ಪಕ್ಷಕ್ಕೆ, ಆ ದ್ರವ್ಯವನ್ನು ಯೆಹೋವನಿಗೆ ಕೊಡಬೇಕು. ಅವನು ಯಾಜಕನಿಗೆ ಪೂರ್ಣ ಬೆಲೆಯನ್ನು ಕೊಡಬೇಕು. ತಪ್ಪು ಮಾಡಿದವನು ಯಾಜಕನಿಗೆ ಒಂದು ಟಗರನ್ನೂ ತಂದುಕೊಡಬೇಕು. ಈ ಟಗರನ್ನು ತಪ್ಪುಮಾಡಿದವನ ಪ್ರಾಯಶ್ಚಿತ್ತಕ್ಕಾಗಿ ಯಜ್ಞಮಾಡಬೇಕು. ಆದರೆ ಉಳಿದದ್ದನ್ನು ಯಾಜಕನು ಇಟ್ಟುಕೊಳ್ಳಬಹುದು.


ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.


ಆ ವ್ಯಕ್ತಿಯೂ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮಾಡಿದ ಪಾಪಕ್ಕಾಗಿ ಈ ಬೆಲೆಯನ್ನು ತೆರಬೇಕು. ಇದಲ್ಲದೆ ಆ ಬೆಲೆಯ ಐದನೆಯ ಒಂದು ಭಾಗವನ್ನು ಸೇರಿಸಿ ಆ ಹಣವನ್ನು ಯಾಜಕನಿಗೆ ಕೊಡಬೇಕು. ಈ ರೀತಿಯಾಗಿ ಯಾಜಕನು ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವುದರ ಮೂಲಕ ಅವನನ್ನು ಶುದ್ಧಿಮಾಡುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.


ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.


ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.


ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.


ಇಪ್ಪತ್ತರಿಂದ ಅರವತ್ತು ವರ್ಷದ ಒಳಗಿರುವ ಮನುಷ್ಯನ ಬೆಲೆ ಐವತ್ತು ಶೆಕೆಲ್ ಬೆಳ್ಳಿಯಾಗಿದೆ. (ಬೆಳ್ಳಿಯನ್ನು ಅಳೆಯಲು ಅಧಿಕೃತ ಅಳತೆಯನ್ನು ಉಪಯೋಗಿಸಬೇಕು.)


ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು