Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:17 - ಪರಿಶುದ್ದ ಬೈಬಲ್‌

17 “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದಾದರೊಂದನ್ನು ಮಾಡಿ ದೋಷಕ್ಕೆ ಗುರಿಯಾಗಿದ್ದರೆ, ಅದು ಅವನಿಗೆ ತಿಳಿದಿಲ್ಲದಿದ್ದರೂ ಅವನು ಆ ಪಾಪಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ ಅದು ಅವನಿಗೆ ತಿಳಿಯದೆಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:17
11 ತಿಳಿವುಗಳ ಹೋಲಿಕೆ  

“ಸಾಮಾನ್ಯ ಜನರಲ್ಲಿ ಒಬ್ಬನು ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗಿದ್ದಾನೆ.


“ಇಸ್ರೇಲರ ಇಡೀ ಜನಾಂಗವೆಲ್ಲಾ ತಿಳಿಯದೆ ಪಾಪಮಾಡುವ ಸ್ಥಿತಿ ಸಂಭವಿಸಬಹುದು. ಯೆಹೋವನು ಮಾಡಬಾರದೆಂದು ಆಜ್ಞಾಪಿಸಿದವುಗಳಲ್ಲಿ ಯಾವುದಾದರೊಂದನ್ನು ಅವರು ಮಾಡಿದರೆ ಅವರು ದೋಷಿಗಳಾಗುವರು.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”


“ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ.


ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”


ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.


ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.


ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು