Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:4 - ಪರಿಶುದ್ದ ಬೈಬಲ್‌

4 “ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಕೇಡಿಗಾಗಲಿ ಯಾವದಾದರೂ ಆಣೆಯಿಟ್ಟುಕೊಂಡರೆ ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:4
25 ತಿಳಿವುಗಳ ಹೋಲಿಕೆ  

ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.


ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.


ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು.


ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದುಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು.


ಆದರೆ ಗಂಡನು ಅದನ್ನು ಕೇಳಿದ ದಿನವೇ ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ಯೆಹೋವನು ಅವಳನ್ನು ಕ್ಷಮಿಸುವನು.


ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು.


ಆದ್ದರಿಂದ ಅವನು, “ನಿನಗೆ ಏನು ಬೇಕಾದರೂ ನಾನು ಕೊಡುತ್ತೇನೆ” ಎಂದು ಅವಳಿಗೆ ವಾಗ್ದಾನ ಮಾಡಿದನು.


ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು.


ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.


ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ನಾನು ಎಷ್ಟು ದುಃಖಿತಳೆಂಬುದನ್ನು ನೋಡು, ನನ್ನನ್ನು ಜ್ಞಾಪಿಸಿಕೊ! ನನ್ನನ್ನು ಮರೆಯದಿರು. ನೀನು ನನಗೊಬ್ಬ ಮಗನನ್ನು ಕರುಣಿಸಿದರೆ, ಅವನು ಜೀವದಿಂದಿರುವ ತನಕ ನಿನ್ನವನಾಗಿರುವಂತೆ ನಿನಗೇ ಪ್ರತಿಷ್ಠಿಸುತ್ತೇನೆ. ಅವನು ನಾಜೀರನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಇತರೆ ಮದ್ಯವನ್ನಾಗಲಿ ಸೇವಿಸುವುದಿಲ್ಲ. ಅವನ ತಲೆಕೂದಲನ್ನು ಕ್ಷೌರ ಕತ್ತಿಯಿಂದ ಕತ್ತರಿಸುವುದಿಲ್ಲ” ಎಂದು ಹೇಳಿದಳು


ಆದರೆ ನಾವೂ ನಮ್ಮ ಹೆಣ್ಣುಮಕ್ಕಳೂ ಬೆನ್ಯಾಮೀನ್ಯರೊಂದಿಗೆ ಮದುವೆಯಾಗಲು ಒಪ್ಪುವಂತಿಲ್ಲ. ಏಕೆಂದರೆ ‘ಬೆನ್ಯಾಮೀನ್ಯರಿಗೆ ಯಾರಾದರೂ ಹೆಣ್ಣನ್ನು ಕೊಟ್ಟರೆ ಅವರು ಶಾಪಗ್ರಸ್ತರಾಗುತ್ತಾರೆ’ ಎಂದು ನಾವೇ ಆಣೆ ಇಟ್ಟಿದ್ದೇವೆ.


ನಮ್ಮ ಹೆಣ್ಣುಮಕ್ಕಳು ಬೆನ್ಯಾಮೀನ್ಯರನ್ನು ಮದುವೆಯಾಗಲು ಬಿಡುವುದಿಲ್ಲವೆಂದು ನಾವು ಯೆಹೋವನ ಎದುರಿಗೆ ಪ್ರತಿಜ್ಞೆ ಮಾಡಿದ್ದೇವೆ. ಇನ್ನು ಮುಂದೆ ಬೆನ್ಯಾಮೀನ್ಯರಿಗೆ ಹೆಂಡಂದಿರನ್ನು ದೊರಕಿಸುವುದು ಹೇಗೆ?” ಎಂದು ಅವರು ಯೋಚಿಸಿದರು.


ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ.


ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.


ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.


“ಆದರೆ ಅವಳು ತನ್ನ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಿಲ್ಲದಿರುವಾಗಲೇ ಮದುವೆಯಾದರೆ,


“ಒಬ್ಬನು ಮತ್ತೊಬ್ಬನ ದೇಹದೊಳಗಿಂದ ಬರುವ ಯಾವುದಾದರೂ ಅಶುದ್ಧ ವಸ್ತುವನ್ನು ತಿಳಿಯದೆ ಮುಟ್ಟಿದರೂ, ತಿಳಿದುಬಂದಾಗ ಅವನು ದೋಷಿಯಾಗುವನು.


ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”


ಅವರು ಆತನಿಗೆ (ದೇವಾರಾತ್ಮನಿಗೆ) ವಿರೋಧವಾಗಿ ನಿಂತರು. ಇದರಿಂದ ಬೇಸರಗೊಂಡಿದ್ದ ಮೋಶೆಯು ದುಡುಕಿ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು