Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:6 - ಪರಿಶುದ್ದ ಬೈಬಲ್‌

6 ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:6
13 ತಿಳಿವುಗಳ ಹೋಲಿಕೆ  

ಆ ವ್ಯಕ್ತಿ ತನ್ನ ಪಾಪದ ಕುರಿತು ತಿಳಿದುಕೊಂಡರೆ, ಆಗ ಅವನು ಅಂಗದೋಷವಿಲ್ಲದ ಒಂದು ಆಡನ್ನು ತರಬೇಕು. ಅದು ಅವನ ಪಾಪಪರಿಹಾರಕ ಯಜ್ಞವಾಗಿದೆ. ಅವನು ತಾನು ಮಾಡಿದ ಪಾಪಕ್ಕಾಗಿ ಆಡನ್ನು ತರಬೇಕು.


“ಆ ವ್ಯಕ್ತಿಯು ಕುರಿಮರಿಯನ್ನು ತನ್ನ ಪಾಪಪರಿಹಾರಕ ಯಜ್ಞವಾಗಿ ತರುವುದಾದರೆ ಅದು ದೋಷವಿಲ್ಲದ ಹೆಣ್ಣು ಕುರಿಮರಿಯಾಗಿರಬೇಕು.


ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.


ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.


ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.


ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.


ಅನಂತರ ಅವನು ಪವಿತ್ರಸ್ಥಳಕ್ಕೆ ತಿರುಗಿ ಹೋಗಬಹುದು. ಆದರೆ ಒಳಗಿನ ಪ್ರಾಕಾರದೊಳಗೆ ಹೋಗುವ ದಿನದಂದು ಯಾಜಕನು ಮೊದಲು ತನಗಾಗಿ ಪಾಪಪರಿಹಾರಕಯಜ್ಞವನ್ನು ಸಮರ್ಪಿಸಿಕೊಳ್ಳಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು