Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:7 - ಪರಿಶುದ್ದ ಬೈಬಲ್‌

7 “ಅವನು ಕುರಿಮರಿಯನ್ನು ಕೊಡುವುದಕ್ಕೆ ಶಕ್ತನಾಗಿಲ್ಲದಿದ್ದರೆ, ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಅವುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವನ್ನಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:7
24 ತಿಳಿವುಗಳ ಹೋಲಿಕೆ  

“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.


ಅವನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಅವನು ಪಕ್ಷಿಗಳನ್ನು ಧಾನ್ಯಸಮರ್ಪಣೆಯೊಂದಿಗೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯ ಶುದ್ಧೀಕರಣಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು; ಆಗ ಆ ವ್ಯಕ್ತಿ ಶುದ್ಧನಾಗುವನು.”


“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.


“ಆರೋನನು ಇಸ್ರೇಲರಿಂದ ಪಾಪಪರಿಹಾರಕ ಯಜ್ಞಕ್ಕಾಗಿ ಎರಡು ಹೋತಗಳನ್ನು ಮತ್ತು ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು.


ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.


ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.


“ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.


ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.


“ದೋಷಪರಿಹಾರಕ ಯಜ್ಞದ ನಿಯಮಗಳು: ಅದು ಪವಿತ್ರವಾದದ್ದು.


“ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.


“ಬಳಿಕ ಯಾಜಕನು ಬೆಳವಕ್ಕಿಗಳಲ್ಲಿ ಅಥವಾ ಪಾರಿವಾಳ ಮರಿಗಳಲ್ಲಿ ಒಂದನ್ನು ಸಮರ್ಪಿಸಬೇಕು (ಆ ವ್ಯಕ್ತಿಯು ಯಾವುದನ್ನು ಕೊಡಲು ಶಕ್ತನಾಗಿದ್ದಾನೊ ಅದನ್ನು ಅವನು ಸಮರ್ಪಿಸಬೇಕು.)


“ಇದನ್ನು ಇಸ್ರೇಲರಿಗೆ ತಿಳಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಆಸ್ತಿಯ ವಿಷಯದಲ್ಲಿ ಮೋಸಗೊಳಿಸಿದರೆ ಅವನು ಸುಳ್ಳುಪ್ರಮಾಣ ಮಾಡುವುದರ ಮೂಲಕ ಯೆಹೋವನಿಗೆ ವಿರೋಧವಾಗಿ ಹೊಲಸಾದ ಕಾರ್ಯವನ್ನು ಮಾಡಿದಂತಾಯಿತು. ಆದ್ದರಿಂದ ಅವನು ದೋಷಿಯಾಗಿದ್ದಾನೆ.


ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು.


ಆಗ ಯಾಜಕನು ಒಂದನ್ನು ದೋಷಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಅವನಿಗೆ ಹೆಣವು ಸೋಂಕಿ ಅವನು ಅಶುದ್ಧನಾದದ್ದರಿಂದ ಈ ಸರ್ವಾಂಗಹೋಮವು ಅವನಿಗೆ ಪ್ರಾಯಶ್ಚಿತ್ತ ಯಜ್ಞವಾಗಿದೆ. ಆ ಸಮಯದಲ್ಲಿ, ಅವನು ತನ್ನ ತಲೆಯ ಕೂದಲನ್ನು ಯೆಹೋವನಿಗೆ ಕಾಣಿಕೆಯಾಗಿ ಮತ್ತೆ ಹರಕೆ ಮಾಡುವನು.


“ಒಬ್ಬನು ಬೆಲೆಯನ್ನು ಕೊಡಲಾಗದಷ್ಟು ಬಡವನಾಗಿದ್ದರೆ, ಅವನನ್ನು ಯಾಜಕನ ಬಳಿಗೆ ತನ್ನಿರಿ. ಅವನು ಎಷ್ಟು ಹಣ ಕೊಡಲು ಶಕ್ತನಾಗಿದ್ದಾನೆಂದು ಯಾಜಕನು ತೀರ್ಮಾನಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು