Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:14 - ಪರಿಶುದ್ದ ಬೈಬಲ್‌

14 “ಇದು ಧಾನ್ಯಸಮರ್ಪಣೆಯ ನಿಯಮವಾಗಿದೆ: ಆರೋನನ ಪುತ್ರರು ಅದನ್ನು ಸಮರ್ಪಿಸಲು ಯಜ್ಞವೇದಿಕೆಯ ಮುಂಭಾಗದಲ್ಲಿ ಯೆಹೋವನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಧಾನ್ಯನೈವೇದ್ಯದ ಬಗ್ಗೆ ನಿಯಮಗಳಿವು: ಆರೋನನ ವಂಶಜರು ನೈವೇದ್ಯ ದ್ರವ್ಯವನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಎದುರಿಗೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಧಾನ್ಯನೈವೇದ್ಯ ವಿಷಯವಾದ ನಿಯಮಗಳು. ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:14
12 ತಿಳಿವುಗಳ ಹೋಲಿಕೆ  

ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋಧಿಯ ಹಿಟ್ಟನ್ನೂ


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.


ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ


“ನೀವು ಟಗರನ್ನು ಸಮರ್ಪಿಸುವುದಾದರೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಒಳ್ಳೆಯ ಗೋಧಿಯ ಹಿಟ್ಟನ್ನೂ


ಬೆಂಕಿಯು ವೇದಿಕೆಯ ಮೇಲೆ ಉರಿಯುತ್ತಲೇ ಇರಬೇಕು; ಆರಿಹೋಗಬಾರದು.


ಯಾಜಕನು ಧಾನ್ಯನೈವೇದ್ಯದಿಂದ ಒಂದು ಹಿಡಿ ಶ್ರೇಷ್ಠ ಹಿಟ್ಟನ್ನು ಮತ್ತು ಎಣ್ಣೆಯನ್ನು ಮತ್ತು ಎಲ್ಲಾ ಧೂಪವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಅದನ್ನು ವೇದಿಕೆಯ ಮೇಲೆ ಸುಡಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.


ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು