Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:22 - ಪರಿಶುದ್ದ ಬೈಬಲ್‌

22 “ಆರೋನನ ಸ್ಥಾನವನ್ನು ಹೊಂದುವುದಕ್ಕಾಗಿ ಆರೋನನ ಸಂತತಿಯವರಲ್ಲಿ ಆರಿಸಲ್ಪಟ್ಟು ಅಭಿಷೇಕಿಸಲ್ಪಟ್ಟ ಯಾಜಕನು ಯೆಹೋವನಿಗೆ ಈ ಧಾನ್ಯಸಮರ್ಪಣೆ ಮಾಡಬೇಕು. ಈ ನಿಯಮ ಶಾಶ್ವತವಾದದ್ದು. ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತ ಯಾಜಕಪಟ್ಟಕ್ಕೆ ಬರುತ್ತಾನೋ ಅವನೇ ಅದನ್ನು ಸಮರ್ಪಿಸಬೇಕು. ಇದು ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ನಿಶ್ಶೇಷವಾಗಿ ಹೋಮಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:22
13 ತಿಳಿವುಗಳ ಹೋಲಿಕೆ  

ಇದಲ್ಲದೆ ಇತರ ಯಾಜಕರಲ್ಲಿ ಮರಣದ ಕಾರಣದಿಂದ ಒಬ್ಬನೇ ಶಾಶ್ವತವಾಗಿ ಯಾಜಕನಾಗಿ ಮುಂದುವರೆಯಲಾಗಲಿಲ್ಲ. ಆದ್ದರಿಂದ ಅಲ್ಲಿ ಅನೇಕ ಮಂದಿ ಯಾಜಕರಿದ್ದರು.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


(ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು.


“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.


ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”


ಶ್ರೇಷ್ಠವಾದ ಗೋಧಿಹಿಟ್ಟಿಗೆ ಎಣ್ಣೆಯನ್ನು ಬೆರೆಸಿ ಕಬ್ಬಿಣದ ಹಂಚಿನ ಮೇಲೆ ರೊಟ್ಟಿ ಸುಟ್ಟು ಅದನ್ನು ಒಳಗೆ ತರಬೇಕು. ನೀವು ಈ ಸಮರ್ಪಣೆಯನ್ನು ತುಂಡುತುಂಡಾಗಿ ಮುರಿದು ಸಮರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯಾಜಕನ ಪ್ರತಿಯೊಂದು ಧಾನ್ಯಸಮರ್ಪಣೆ ಸಂಪೂರ್ಣವಾಗಿ ಹೋಮವಾಗಬೇಕು. ಅದನ್ನು ತಿನ್ನಲೇಬಾರದು.”


ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.


ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


“ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು