Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:25 - ಪರಿಶುದ್ದ ಬೈಬಲ್‌

25 “ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಹೇಳು: ಪಾಪಪರಿಹಾರಕ ಯಜ್ಞದ ಕಟ್ಟಳೆ ಇದಾಗಿದೆ. ಸರ್ವಾಂಗಹೋಮ ಪಶುವು ವಧಿಸಲ್ಪಡುವ ಸ್ಥಳದಲ್ಲಿಯೇ ಪಾಪಪರಿಹಾರಕ ಯಜ್ಞಪಶುವು ಯೆಹೋವನ ಸನ್ನಿಧಿಯಲ್ಲಿ ವಧಿಸಲ್ಪಡಬೇಕು. ಅದು ಮಹಾ ಪವಿತ್ರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನೀನು ಆರೋನನಿಗೂ ಅವನ ವಂಶಜರಿಗೂ ದೋಷಪರಿಹಾರಕ ಬಲಿ ನಿಯಮಗಳ ಬಗ್ಗೆ ಹೀಗೆ ಆಜ್ಞಾಪಿಸು: ದಹನ ಬಲಿಪ್ರಾಣಿಯನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಬಲಿಪ್ರಾಣಿಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಆರೋನನಿಗೂ ಅವನ ವಂಶದವರಿಗೂ ಹೀಗೆ ಆಜ್ಞಾಪಿಸು - ದೋಷಪರಿಹಾರಕ ಯಜ್ಞನಿಯಮಗಳು. ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನೂ ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:25
13 ತಿಳಿವುಗಳ ಹೋಲಿಕೆ  

ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.


ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಅವನು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಸರ್ವಾಂಗಹೋಮಮಾಡುವ ಸ್ಥಳದಲ್ಲಿ ಅದನ್ನು ವಧಿಸಬೇಕು.


“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಹುಳಿಕಲಸಿ ರೊಟ್ಟಿ ಸುಡಬಾರದು. ನನಗೆ ಅಗ್ನಿಯ ಮೂಲಕ ಹೋಮವಾಗಿ ಅರ್ಪಿಸಿದ ಸಮರ್ಪಣೆಗಳಲ್ಲಿ ನಾನು ಅದನ್ನು ಯಾಜಕರ ಪಾಲನ್ನಾಗಿ ಕೊಟ್ಟಿದ್ದೇನೆ. ಅದು ಪಾಪಪರಿಹಾರಕ ಯಜ್ಞದಂತೆಯೂ ದೋಷಪರಿಹಾರಕ ಯಜ್ಞದಂತೆಯೂ ಮಹಾ ಪವಿತ್ರವಾಗಿದೆ.


ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


“ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ.


ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಈ ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು.


ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು