Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:4 - ಪರಿಶುದ್ದ ಬೈಬಲ್‌

4 ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-5 ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಆಯಾ ವಸ್ತುಗಳನ್ನೇ ಅಂದರೆ ಕದ್ದದ್ದನ್ನೂ ಮೋಸದಿಂದ ಪಡೆದದ್ದನ್ನೂ ತನ್ನ ವಶಕ್ಕೆ ತೆಗೆದುಕೊಂಡದ್ದನ್ನೂ ತಾನು ಕಂಡುಕೊಂಡದ್ದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:4
20 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಹೊಸ್ತಿಲನ್ನು ಹಾರಿ ತಮ್ಮ ಒಡೆಯರ ಮನೆಯನ್ನು ತಮ್ಮ ಸುಳ್ಳು, ಮೋಸ, ಹಿಂಸೆಗಳಿಂದ ತುಂಬಿರುವವರನ್ನು ಶಿಕ್ಷಿಸುತ್ತೇನೆ” ಎಂದು ಯೆಹೋವನು ನುಡಿಯುತ್ತಾನೆ.


ಅವರಿಗೆ ಹೊಲಗದ್ದೆಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಅವರಿಗೆ ಮನೆಮಠಗಳು ಬೇಕು, ಅದನ್ನು ಅವರು ತೆಗೆದುಕೊಳ್ಳುವರು. ಒಬ್ಬನಿಗೆ ಮೋಸಮಾಡಿ ಅವನ ಮನೆಯನ್ನು ಕಿತ್ತುಕೊಳ್ಳುವರು. ಇನ್ನೊಬ್ಬನಿಗೆ ಮೋಸಮಾಡಿ ಅವನ ಹೊಲಗದ್ದೆಗಳನ್ನು ಕಿತ್ತುಕೊಳ್ಳುವರು.


ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.


ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.


ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;


ಜೇಡರ ಬಲೆಗಳ ನೂಲಿನಿಂದ ಬಟ್ಟೆ ನೇಯಲಾಗದು. ಆ ಬಲೆಯಿಂದ ನಿಮ್ಮ ಶರೀರವನ್ನು ಮುಚ್ಚಲಾಗುವದಿಲ್ಲ. ಕೆಲವರು ತಮ್ಮ ಕೈಗಳಿಂದ ಇತರರಿಗೆ ಕೇಡುಮಾಡುವರು.


“ಜಮೀನಿನ ಮೇರೆಯನ್ನು ಸರಿಸುವವರೂ ಇದ್ದಾರೆ. ದನಕುರಿಗಳನ್ನು ಅಪಹರಿಸಿಕೊಂಡು ಹೋಗುವವರೂ ಇದ್ದಾರೆ.


ಯಾಕೆಂದರೆ ದುಷ್ಟನು ಬಡವರನ್ನು ಕಡೆಗಣಿಸಿದ್ದಾನೆ; ಬೇರೊಬ್ಬನು ಕಟ್ಟಿದ ಮನೆಗಳನ್ನು ಕಿತ್ತುಕೊಂಡಿದ್ದಾನೆ.


ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು.


ಇನ್ನೊಬ್ಬನಿಗೆ ಸೇರಿದ ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಇನ್ನೊಂದು ಪಶುವನ್ನು ಕೊಡಬೇಕು.


ಒಬ್ಬನು ಪಶುವೊಂದನ್ನು ಕೊಂದರೆ, ಅವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಆದರೆ ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.


ಆದ್ದರಿಂದ ಅಂಥವನು ತನ್ನ ಪಾಪವನ್ನು ಅರಿಕೆಮಾಡಬೇಕು. ಅದಲ್ಲದೆ, ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ಒತ್ತೆ ತೆಗೆದುಕೊಂಡಿದ್ದ ವಸ್ತುಗಳನ್ನು ಹಿಂದಕ್ಕೆ ಕೊಟ್ಟು, ತಾನು ಕದ್ದುಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಕರವಾದ ಕಟ್ಟಳೆಗಳನ್ನು ಅನುಸರಿಸಿದರೆ ಆ ಮನುಷ್ಯನು ಖಂಡಿತವಾಗಿ ಬದುಕುವನು. ಅವನನ್ನು ಸಾಯಿಸುವುದಿಲ್ಲ.


ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.


ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.


ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು