Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:7 - ಪರಿಶುದ್ದ ಬೈಬಲ್‌

7 ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:7
22 ತಿಳಿವುಗಳ ಹೋಲಿಕೆ  

ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.


ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.


ಆದರೆ ಒಬ್ಬ ಪಾಪಿ ತನ್ನ ದುಷ್ಟತನವನ್ನು ಬಿಟ್ಟು ನೀತಿವಂತನಾಗಿ ಬಾಳಿದರೆ ಅವನು ಜೀವಿಸುವನು.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.


ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.”


ತರುವಾಯ ಯಾಜಕನು ಎರಡನೆಯ ಪಕ್ಷಿಯನ್ನು ಸರ್ವಾಂಗಹೋಮದ ವಿಧಿಗಳಿಗನುಸಾರವಾಗಿ ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಅವನನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.


ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ಯಾಜಕನು ಸರ್ವಾಂಗಹೋಮ ಸಮರ್ಪಣೆಗಳ ಪಶುವನ್ನು ವಧಿಸುವ ಸ್ಥಳದಲ್ಲಿಯೇ ದೋಷಪರಿಹಾರಕ ಪಶುವನ್ನು ವಧಿಸಬೇಕು. ಬಳಿಕ ಯಾಜಕನು ದೋಷಪರಿಹಾರಕ ಯಜ್ಞದ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಬೇಕು.


“ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು