ಯಾಜಕಕಾಂಡ 7:37 - ಪರಿಶುದ್ದ ಬೈಬಲ್37 ಅವುಗಳೇ ಸರ್ವಾಂಗಹೋಮಗಳ, ಧಾನ್ಯಸಮರ್ಪಣೆಗಳ, ಪಾಪಪರಿಹಾರಕ ಯಜ್ಞಗಳ, ದೋಷಪರಿಹಾರಕ ಯಜ್ಞಗಳ, ಸಮಾಧಾನಯಜ್ಞಗಳ ಮತ್ತು ಯಾಜಕರನ್ನು ಪ್ರತಿಷ್ಠಿಸುವ ನಿಯಮಗಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ದಹನಬಲಿದಾನ, ಧಾನ್ಯನೈವೇದ್ಯ, ದೋಷಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿ, ಯಾಜಕ ಅಭ್ಯಂಜನ ಬಲಿ, ಶಾಂತಿಸಮಾಧಾನ ಬಲಿ ಎಂಬ ಇವುಗಳ ವಿಷಯದಲ್ಲಿ ಮೇಲೆ ಹೇಳಿದ್ದೇ ಬಲಿದಾನ ವಿಧಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ, ಸಮಾಧಾನ ಯಜ್ಞ ಎಂಬಿವುಗಳ ವಿಷಯದಲ್ಲಿ ಮೇಲೆ ಕಂಡದ್ದೆ ವಿಧಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ. ಅಧ್ಯಾಯವನ್ನು ನೋಡಿ |
“ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.