Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:6 - ಪರಿಶುದ್ದ ಬೈಬಲ್‌

6 “ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೋಮ ಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರು ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:6
11 ತಿಳಿವುಗಳ ಹೋಲಿಕೆ  

“ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ.


ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.


ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.


ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?


ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮ ಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಹೋಮವಾಗಿರುವುದು. ಅದು ದೋಷಪರಿಹಾರಕ ಯಜ್ಞವಾಗಿದೆ.


ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.


‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’” ಯಾಜಕರು ಉತ್ತರವಾಗಿ, “ಇಲ್ಲ” ಎಂದರು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ತೆಗೆದುಹಾಕಿ ಬೇರೆ ಬಟ್ಟೆಗಳನ್ನು ಧರಿಸಿಕೊಂಡು ಬೂದಿಯನ್ನು ಪಾಳೆಯದ ಹೊರಗೆ ಒಂದು ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು