Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:11 - ಪರಿಶುದ್ದ ಬೈಬಲ್‌

11 ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆ ಅವುಗಳನ್ನು ಪವಿತ್ರಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿವಿುಕಿಸಿ ವೇದಿಯನ್ನೂ ಅದರ ಎಲ್ಲಾ ಉಪಕರಣಗಳನ್ನೂ ಗಂಗಾಳವನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:11
13 ತಿಳಿವುಗಳ ಹೋಲಿಕೆ  

ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮೂಲಕ ದೇವರು ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”


ಆಗ ನೀನು ಈ ಉಪಕರಣಗಳನ್ನೆಲ್ಲ ಪವಿತ್ರಗೊಳಿಸುವೆ. ಅವುಗಳು ಯೆಹೋವನಿಗೆ ಬಹು ವಿಶೇಷವಾಗಿವೆ. ಅವುಗಳಿಗೆ ಸೋಂಕಿದ್ದೆಲ್ಲವೂ ಪವಿತ್ರವಾಗುತ್ತವೆ.


ಮೋಶೆಯು ಅವರಿಗೆ, “ಆಹಾರವನ್ನು ಮರುದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು.


ಸೂರ್ಯನು ಮೇಲಕ್ಕೇರಿದ ನಂತರ ಮಂಜು ಕರಗಿ ಇಲ್ಲವಾಯಿತು. ಆದರೆ ಮಂಜು ಕರಗಿ ಹೋದನಂತರ ನೆಲದ ಮೇಲೆ ಮಂಜಿನ ಹನಿಗಳಂತಿದ್ದ ತೆಳುವಾದ ಕಾಳುಗಳು ಬಿದ್ದಿದ್ದವು.


ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು.


ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.


ಏಳು ದಿನಗಳವರೆಗೆ ಪ್ರತಿದಿನ ಒಂದು ಹೋರಿಯನ್ನು ವಧಿಸು. ಇದು ಆರೋನನ ಮತ್ತು ಅವನ ಪುತ್ರರ ಪಾಪನಿವಾರಣೆಯ ಸಮರ್ಪಣೆಯಾಗಿರುವುದು. ಅದಲ್ಲದೆ ಯಜ್ಞವೇದಿಕೆಯನ್ನು ಪರಿಶುದ್ಧಗೊಳಿಸಲು ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.


ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ತೆರೆಯ ಮುಂದೆ ಏಳು ಸಾರಿ ಚಿಮಿಕಿಸಬೇಕು.


ಬಳಿಕ ಯಾಜಕನು ತನ್ನ ಬಲಗೈಯ ಬೆರಳನ್ನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಎಣ್ಣೆಯನ್ನು ಏಳುಸಲ ಚಿಮಿಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು