ಯಾಜಕಕಾಂಡ 8:14 - ಪರಿಶುದ್ದ ಬೈಬಲ್14 ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನೂ ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. ಅಧ್ಯಾಯವನ್ನು ನೋಡಿ |
ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.