Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:3 - ಪರಿಶುದ್ದ ಬೈಬಲ್‌

3 ಮತ್ತು ಜನರನ್ನು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಿಗೆ ಎದುರಿನಲ್ಲಿ ಸೇರಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜನಸಮೂಹವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಕರೆಯಿಸು,” ಎಂದು ಆಜ್ಞೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕರಿಸು ಎಂದು ಆಜ್ಞಾಪಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಲ್ಲಾ ಸಭೆಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:3
16 ತಿಳಿವುಗಳ ಹೋಲಿಕೆ  

ಪಂಚಾಶತ್ತಮ ಹಬ್ಬದ ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು.


ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.


ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.


ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು.


ಹಿಜ್ಕೀಯ ಅರಸನೂ ಅಧಿಕಾರಿಗಳೂ ಜೆರುಸಲೇಮಿನ ಸಭೆಯವರೆಲ್ಲರೂ ಎರಡನೆಯ ತಿಂಗಳಲ್ಲಿ ಹಬ್ಬವನ್ನು ಆಚರಿಸಲು ನಿರ್ಧರಿಸಿದರು.


ಸೊಲೊಮೋನನು ಮತ್ತು ಇಸ್ರೇಲರೆಲ್ಲರೂ ಆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ನೆರೆದು ಬಂದರು. ಸೊಲೊಮೋನನು ಮತ್ತು ಎಲ್ಲಾ ಇಸ್ರೇಲರೂ ಲೆಕ್ಕವಿಲ್ಲದಷ್ಟು ಕುರಿಗಳನ್ನೂ ಹೋರಿಗಳನ್ನೂ ಯಜ್ಞ ಮಾಡಿದರು.


ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.


ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.


ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು.


ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಈ ಬಾವಿಯ ಸ್ಥಳದಲ್ಲೇ.


“ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.


“ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.


ಯೆಹೋವನು ಆಜ್ಞಾಪಿಸಿದ್ದನ್ನು ಮೋಶೆ ಮಾಡಿದನು. ಜನರು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಲ್ಲಿ ಸೇರಿ ಬಂದರು.


ಲೇವಿಯರನ್ನು ದೇವದರ್ಶನಗುಡಾರದ ಮುಂಭಾಗಕ್ಕೆ ಕರೆದುಕೊಂಡು ಬಂದು ಇಸ್ರೇಲರನ್ನು ಒಟ್ಟಾಗಿ ಸೇರಿಸು.


ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು