Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:6 - ಪರಿಶುದ್ದ ಬೈಬಲ್‌

6 ತರುವಾಯ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದನು. ಅವನು ಅವರಿಗೆ ನೀರಿನಿಂದ ಸ್ನಾನ ಮಾಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಳಿಕ ಮೋಶೆ ಆರೋನನನ್ನೂ ಅವನ ಪುತ್ರರನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಬಂದು, ಸ್ನಾನಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:6
19 ತಿಳಿವುಗಳ ಹೋಲಿಕೆ  

ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


“ತರುವಾಯ ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ದ್ವಾರಕ್ಕೆ ಕರೆದುಕೊಂಡು ಬಾ. ಅವರನ್ನು ನೀರಿನಲ್ಲಿ ಸ್ನಾನಮಾಡಿಸು.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ನನ್ನ ದೋಷವನ್ನು ತೊಳೆದುಬಿಡು. ನನ್ನ ಪಾಪವನ್ನು ಪರಿಹರಿಸಿ ನನ್ನನ್ನು ಮತ್ತೆ ಶುದ್ಧೀಕರಿಸು!


ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


“ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ಬಾಗಿಲಿಗೆ ಕರೆಸು. ಅವರಿಗೆ ನೀರಿನಿಂದ ಸ್ನಾನ ಮಾಡಿಸು.


ಆರೋನನು ಮತ್ತು ಅವನ ಪುತ್ರರು ಈ ಗಂಗಾಳದಲ್ಲಿರುವ ನೀರಿನಿಂದ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ.


ಆಗ ಮೋಶೆ ಜನರಿಗೆ, “ನಾನು ಈಗ ಮಾಡುವ ಕಾರ್ಯವನ್ನು ಯೆಹೋವನೇ ಆಜ್ಞಾಪಿಸಿದನು” ಎಂದು ಹೇಳಿದನು.


ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು