Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:22 - ಪರಿಶುದ್ದ ಬೈಬಲ್‌

22 ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆರೋನನು ಆ ದೋಷಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆಮೇಲೆ ಬಲಿಪೀಠದಿಂದ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆರೋನನು ಆ ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:22
16 ತಿಳಿವುಗಳ ಹೋಲಿಕೆ  

ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು.


ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.”


ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ಸೊಲೊಮೋನನು ತನ್ನ ಮುಂದೆ ನೆರೆದಿದ್ದ ಎಲ್ಲಾ ಇಸ್ರೇಲ್ ಸಮೂಹದವರ ಕಡೆಗೆ ತಿರುಗಿ ಅವರನ್ನು ಆಶೀರ್ವದಿಸಿ,


ಅಮ್ರಾಮನ ಗಂಡುಮಕ್ಕಳು ಯಾರೆಂದರೆ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು.


ಬಳಿಕ ಇಸ್ರೇಲಿನ ಜನರೆಲ್ಲರನ್ನು ಆಶೀರ್ವದಿಸಬೇಕೆಂದು ಅವನು ಗಟ್ಟಿಯಾದ ಧ್ವನಿಯಲ್ಲಿ ದೇವರನ್ನು ಕೇಳಿಕೊಂಡನು. ಸೊಲೊಮೋನನು ಹೀಗೆ ಹೇಳಿದನು:


ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.


ಮೋಶೆಯು ಎಲ್ಲಾ ಕೆಲಸವನ್ನು ಸೂಕ್ಷ್ಮವಾಗಿ ಪರೀಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಎಲ್ಲವೂ ಮಾಡಲ್ಪಟ್ಟಿದ್ದರಿಂದ ಮೋಶೆ ಅವರನ್ನು ಆಶೀರ್ವದಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು