Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:16 - ಪರಿಶುದ್ದ ಬೈಬಲ್‌

16 ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹಿ ಚುಕ್ ಶಿಕಾಪಾ ಶಿಕ್ವುತಲಿ ಲೊಕಾ ದುಸ್ರ್ಯಾಕ್ನಿ ದೊಶ್ ದಿತ್ಯಾತ್, ತೆನಿ ಅಪ್ನಾಚ್ಯಾ ಬುರ್ಶ್ಯಾ ಆಶಾಂಚ್ಯಾ ಸಾರ್ಕೆ ಚಲ್ತಾತ್ ಅನಿ ಅಪ್ನಾಚ್ಯಾ ಫಾಯ್ದ್ಯಾ ಸಾಟ್ನಿ ದುಶ್ರ್ಯಾಂಚಿ ಬಡಾಯ್ ಬೊಲುನ್ ದಾಕ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:16
38 ತಿಳಿವುಗಳ ಹೋಲಿಕೆ  

ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.


ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ.


ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.


ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.


ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.


ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.


ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.


ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.


ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.


“ನೀವು ಕೊಡುವ ತೀರ್ಪು ನ್ಯಾಯವಾಗಿರಬೇಕು. ಬಡವರ ಬಡತನವನ್ನಾಗಲಿ ಪ್ರಾಮುಖ್ಯರ ದೊಡ್ಡಸ್ತಿಕೆಯನ್ನಾಗಲಿ ಗಮನಿಸದೆ ಪಕ್ಷಪಾತವಿಲ್ಲದೆ ತೀರ್ಪುಕೊಡಬೇಕು. ನೀವು ನಿಮ್ಮ ನೆರೆಯವನಿಗೆ ತೀರ್ಪುಮಾಡುವಾಗ ನ್ಯಾಯದ ತೀರ್ಪುಕೊಡಿರಿ.


ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”


ನೀವು ಮೊದಲು ಈ ಸಂಗತಿಗಳ ಕುರಿತು ಅರ್ಥಮಾಡಿಕೊಳ್ಳದಿದ್ದ ಕಾರಣ, ನೀವು ನಿಮ್ಮ ಇಚ್ಛೆಯಂತೆ ಕೆಟ್ಟಕಾರ್ಯಗಳನ್ನು ಮಾಡಿದಿರಿ. ಆದರೆ ಈಗ ನೀವು ವಿಧೇಯರಾಗಿರುವ ದೇವಮಕ್ಕಳು, ಆದ್ದರಿಂದ ಈಗ ಮೊದಲಿನಂತೆ ಜೀವಿಸಬೇಡಿ.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ.


ತನ್ನ ಶಿಷ್ಯರು ಆಕ್ಷೇಪಿಸುತ್ತಿರುವುದನ್ನು ತಿಳಿದಿದ್ದ ಯೇಸು, “ಈ ಉಪದೇಶದಿಂದ ನಿಮಗೆ ಬೇಸರವಾಯಿತೇ?


ಅವರಲ್ಲಿ ಅನೇಕರು ಸರಿಯಾಗಿ ತಿಳಿದುಕೊಳ್ಳಲಿಲ್ಲ. ಆದ್ದರಿಂದ ಅವರು ತಪ್ಪಿಹೋದರು. ಆದರೆ ಅವರು ಪಾಠಗಳನ್ನು ಕಲಿತುಕೊಳ್ಳುವರು.”


ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. ಅವರು ಜಂಬಕೊಚ್ಚಿಕೊಳ್ಳುತ್ತಾರೆ.


ನೀನು ಮತ್ತು ನಿನ್ನ ಹಿಂಬಾಲಕರು ಒಟ್ಟಾಗಿ ಸೇರಿಕೊಂಡು ಯೆಹೋವನಿಗೆ ವಿರೋಧವಾಗಿ ದಂಗೆ ಎದ್ದಿದ್ದೀರಿ. ಆರೋನನು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಆರಿಸಿಕೊಂಡನೋ? ಇಲ್ಲ! ಹೀಗಿರಲು ಆರೋನನಿಗೆ ವಿರೋಧವಾಗಿ ಗುಣುಗುಟ್ಟುವುದೇಕೆ?” ಎಂದು ಹೇಳಿದನು.


ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.


ನಿಮ್ಮ ದೇಹವನ್ನು ಲೈಂಗಿಕ ಪಾಪಗಳಿಗಾಗಿ ಬಳಸಬೇಡಿ. ದೇವರನ್ನು ತಿಳಿಯದ ಜನರು ತಮ್ಮ ದೇಹಗಳನ್ನು ಅದಕ್ಕೆ ಬಳಸುತ್ತಾರೆ.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ಯೆಹೂದ್ಯರು ಯೇಸುವಿನ ಬಗ್ಗೆ ಗುಣುಗುಟ್ಟಿದರು. “ಪರಲೋಕದಿಂದ ಇಳಿದುಬರುವ ರೊಟ್ಟಿಯೇ ನಾನು” ಎಂದು ಆತನು ಹೇಳಿದ್ದರಿಂದ ಅವರು ಆಕ್ಷೇಪಿಸಿದರು.


ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.


ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.


ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.


ಪಕ್ಷಪಾತ ತಪ್ಪು. ಕೆಲವರಾದರೋ ಒಂದು ತುಂಡು ರೊಟ್ಟಿಗಾಗಿಯೂ ತಪ್ಪು ಮಾಡುವರು.


ನಮ್ಮ ಪೂರ್ವಿಕರು ತಮ್ಮತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ದೇವರ ಮಾತಿಗೆ ವಿಧೇಯರಾಗಲಿಲ್ಲ.


ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.


ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ.


ನಿಮ್ಮನಿಮ್ಮ ಗುಡಾರಗಳಲ್ಲಿ ಯೆಹೋವನ ವಿರುದ್ಧವಾಗಿ ಗೊಣಗುಟ್ಟಿದಿರಿ, ‘ನಮ್ಮ ಯೆಹೋವನು ನಮ್ಮನ್ನು ದ್ವೇಷಿಸುತ್ತಾನೆ! ನಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ಅಮೋರಿಯರಿಂದ ನಾಶಪಡಿಸುತ್ತಿದ್ದಾನೆ!


ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟು ಹಿಂದಿರುಗಿಬಂದು ಆ ದೇಶದ ವಿಷಯದಲ್ಲಿ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದರವರನ್ನು ಅವರಿಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿದ ಹತ್ತು ಜನರು ಯೆಹೋವನಿಂದ ವ್ಯಾಧಿಗೊಳಗಾಗಿ ಸತ್ತರು.


ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣುಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.


ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟದ್ದನ್ನೇ ಮಾತಾಡುವರು. ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು