Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:19 - ಪರಿಶುದ್ದ ಬೈಬಲ್‌

19 ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರು ಭೇದಗಳನ್ನು ಉಂಟುಮಾಡುವವರೂ ಪ್ರಾಕೃತಮನುಷ್ಯರೂ ದೇವರಾತ್ಮವಿಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹಿ ಲೊಕಾ ಹ್ಯಾ ಜಗಾಚಿ ಲೊಕಾತ್ನಿ ಭೆದ್‍ಭಾವ್ ಯೆವ್ಕ್ ಕಾರನ್ ಹೊತಾತ್, ತೆನಿ ಹ್ಯಾ ಜಗಾಚ್ಯಾ ಆಶಾಚ್ಯಾ ಪರ್ಕಾರ್ ಚಲ್ತಾತ್, ತೆಂಚ್ಯಾಕ್ಡೆ ಪವಿತ್ರ್ ಆತ್ಮೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:19
11 ತಿಳಿವುಗಳ ಹೋಲಿಕೆ  

ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.


ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.


ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.


“ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.


ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.


“ನಿಮ್ಮ ಹೆಣ್ಣುಮಕ್ಕಳು ಸೂಳೆತನ ಮಾಡುವದಕ್ಕಾಗಲಿ ನಿಮ್ಮ ಸೊಸೆಯರು ಲೈಂಗಿಕಪಾಪ ಮಾಡುವದಕ್ಕಾಗಲಿ ನಾನು ಅವರನ್ನು ದೂರುವದಿಲ್ಲ. ಗಂಡಸರು ವೇಶ್ಯೆಯರೊಂದಿಗೆ ಮಲಗುವರು. ಅವರು ಮಂದಿರದ ವೇಶ್ಯೆಯರೊಂದಿಗೆ ಯಜ್ಞವನ್ನರ್ಪಿಸುವರು. ಹೀಗೆ ಆ ಬುದ್ಧಿಯಿಲ್ಲದ ಜನರು ತಮ್ಮನ್ನು ತಾವೇ ನಾಶಮಾಡಿಕೊಳ್ಳುತ್ತಾರೆ.


ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.


ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.


ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು