Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:4 - ಪರಿಶುದ್ದ ಬೈಬಲ್‌

4 ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್‍ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:4
32 ತಿಳಿವುಗಳ ಹೋಲಿಕೆ  

ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.


ಆದ್ದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ.


ಸ್ವತಂತ್ರ ಹೊಂದಿದವರಂತೆ ಜೀವಿಸಿರಿ. ಆದರೆ ನೀವು ಮಾಡುವ ಕೆಟ್ಟಕಾರ್ಯಗಳನ್ನು ಮರೆಮಾಡಲು ಆ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿ. ನೀವು ದೇವರ ಸೇವೆಯನ್ನು ಮಾಡುತ್ತಾ ಜೀವಿಸಿರಿ.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ಅವರಲ್ಲಿ ಕೆಲವರು ಮನೆಗಳಿಗೆ ನುಸುಳಿಕೊಂಡು ಹೋಗಿ, ಪಾಪಿಷ್ಠರಾದ ಸ್ತ್ರೀಯರನ್ನು ವಶಪಡಿಸಿಕೊಳ್ಳುತ್ತಾರೆ. ಆ ಸ್ತ್ರೀಯರು ಅನೇಕ ಪಾಪದೋಷಗಳಿಂದ ತುಂಬಿದವರಾಗಿದ್ದಾರೆ.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


ಆತನು ನನಗೆ ಬಂಡೆಯೂ ರಕ್ಷಣೆಯೂ ಕೋಟೆಯೂ ಆಗಿದ್ದಾನೆ. ನಾನೆಂದಿಗೂ ಕದಲೆನು.


ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


ಪ್ರಭುವು ಪ್ರತಿಯೊಬ್ಬರಿಗೂ ನ್ಯಾಯತೀರಿಸುತ್ತಾನೆ. ಭಕ್ತಿಹೀನರು ತನಗೆ ವಿರುದ್ಧವಾಗಿ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತನಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಆತನು ಬರುತ್ತಾನೆ.”


“ನೀತಿವಂತನೇ ರಕ್ಷಣೆ ಹೊಂದಲು ಕಷ್ಟವಾದರೆ, ಭಕ್ತಿಹೀನನ ಮತ್ತು ಪಾಪಿಷ್ಠನ ಗತಿಯೇನು?”


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!


ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಆ ರಾತ್ರಿ ಜನರೆಲ್ಲರೂ ನಿದ್ರಿಸುತ್ತಿದ್ದಾಗ ಅವನ ವೈರಿ ಬಂದು ಗೋಧಿಯ ನಡುವೆ ಹಣಜಿಯನ್ನು ಬಿತ್ತಿ ಹೊರಟುಹೋದನು.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ.


ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.


ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ಆದರೆ ದೇವರು ಆ ಪಟ್ಟಣಗಳಿಂದ ಲೋಟನನ್ನು ರಕ್ಷಿಸಿದನು. ಲೋಟನು ನೀತಿವಂತನಾಗಿದ್ದನು. ದುಷ್ಟ ಜನರ ಕೆಟ್ಟ ನಡತೆಯಿಂದ ಅವನು ದುಃಖಗೊಂಡಿದ್ದನು.


ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು