Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:6 - ಪರಿಶುದ್ದ ಬೈಬಲ್‌

6 ಆಗ ಯೆರೆಮೀಯನೆಂಬ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಬೇಕೆಂಬುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು ಎಂದು ಬಿನ್ನವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:6
12 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ. ರಾಜನು ನನ್ನ ಮಾತನ್ನು ಕೇಳುವನೇ?” ಎಂದು ಉತ್ತರಿಸಿದನು.


ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.


ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.


ಆಗ ಯೆರೆಮೀಯನೆಂಬ ನಾನು, “ನನ್ನ ಒಡೆಯನಾದ ಯೆಹೋವನೇ, ನೀನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮೋಸ ಮಾಡಿದೆ, ‘ನೀವು ಶಾಂತಿಯಿಂದ ಇರುವಿರಿ’ ಎಂದು ನೀನು ಅವರಿಗೆ ಹೇಳಿದೆ. ಆದರೆ ಈಗ ಅವರ ಕತ್ತಿನ ಮೇಲೆ ಖಡ್ಗ ಇದೆ” ಅಂದೆನು.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಆಗ ನಾನು ಹೇಳಿದ್ದೇನೆಂದರೆ, “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಎಂದೂ ಅಶುದ್ಧ ಆಹಾರವನ್ನು ತಿನ್ನಲಿಲ್ಲ. ತಾನಾಗಿಯೇ ಸತ್ತ ಪ್ರಾಣಿಯ ಮಾಂಸವನ್ನಾಗಲಿ ಕಾಡುಪ್ರಾಣಿಯು ಕೊಂದ ಪ್ರಾಣಿಯ ಮಾಂಸವನ್ನಾಗಲಿ ಎಂದೂ ತಿಂದದ್ದಿಲ್ಲ. ಬಾಲ್ಯ ಪ್ರಾಯದಿಂದ ಈ ದಿವಸ ಪರ್ಯಂತ ಅಶುದ್ಧ ಆಹಾರ ತಿಂದಿಲ್ಲ; ಅಂತಹ ಮಾಂಸವೂ ನನ್ನ ಬಾಯೊಳಕ್ಕೆ ಹೋಗಲಿಲ್ಲ.”


ಅವನು, “ಓಡಿಹೋಗಿ ಆ ಯೌವನಸ್ಥನಿಗೆ ಜೆರುಸಲೇಮು ಅಳತೆ ಮಾಡಲು ಸಾಧ್ಯವಾಗದಷ್ಟು ದೊಡ್ಡದಾಗಿದೆ ಎಂದು ಹೇಳು. ಅಲ್ಲದೆ ಅವನಿಗೆ ಈ ವಿಷಯವನ್ನೂ ತಿಳಿಸು: ‘ಜೆರುಸಲೇಮ್ ಗೋಡೆಗಳಿಲ್ಲದ ಪಟ್ಟಣವಾಗುವದು. ಯಾಕೆಂದರೆ ಅಷ್ಟೊಂದು ಜನರೂ ಪಶುಗಳೂ ಅಲ್ಲಿ ವಾಸಿಸುವವು.’


ಆದ್ದರಿಂದ ಯೆರೆಮೀಯನು ಜೆರುಸಲೇಮಿನಲ್ಲಿದ್ದ ಚಿದ್ಕೀಯನಿಗೆ ಯೆಹೋವನ ಸಂದೇಶವನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು