Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:8 - ಪರಿಶುದ್ದ ಬೈಬಲ್‌

8 ಯಾರಿಗೂ ನೀನು ಹೆದರಬೇಡ, ನಾನೇ ನಿನ್ನ ಜೊತೆ ಇದ್ದೇನೆ. ನಾನು ನಿನ್ನನ್ನು ಕಾಪಾಡುತ್ತೇನೆ. ಈ ಮಾತನ್ನು ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರಿಗೆ ಅಂಜಬೇಡ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:8
31 ತಿಳಿವುಗಳ ಹೋಲಿಕೆ  

ನಾನು ಮೋಶೆಯ ಸಂಗಡ ಇದ್ದಂತೆ ನಿನ್ನ ಸಂಗಡವೂ ಇರುತ್ತೇನೆ. ನಿನ್ನ ಜೀವಮಾನದಲ್ಲೆಲ್ಲಾ ಯಾವನೂ ನಿನ್ನನ್ನು ತಡೆಯಲಾರನು. ನಾನು ನಿನ್ನನ್ನು ಕೈಬಿಡುವುದಿಲ್ಲ; ತೊರೆದುಬಿಡುವುದಿಲ್ಲ” ಎಂದು ಹೇಳಿದನು.


ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಒಳ್ಳೆಯತನವನ್ನು ಅರ್ಥಮಾಡಿಕೊಂಡ ನೀವು ನನ್ನ ಮಾತುಗಳನ್ನು ಕೇಳಿರಿ. ನನ್ನ ಬೋಧನೆಯನ್ನು ಅನುಸರಿಸುವ ನೀವು ನನ್ನ ಮಾತಿಗೆ ಕಿವಿಗೊಡಿರಿ. ದುಷ್ಟಜನರಿಗೆ ಭಯಪಡಬೇಡಿರಿ. ಅವರು ನಿಮಗೆ ಹೇಳುವ ಕೆಟ್ಟಮಾತುಗಳಿಗೆ ಭಯಪಡಬೇಡಿ.


ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”


ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.


ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


ನಾನು ನಿನ್ನೊಂದಿಗಿದ್ದೇನೆ. ನಿನಗೆ ಕೇಡುಮಾಡಲು ಯಾರಿಗೂ ಸಾಧ್ಯವಿಲ್ಲ. ನನ್ನ ಅನೇಕ ಜನರು ಈ ಪಟ್ಟಣದಲ್ಲಿ ಇದ್ದಾರೆ” ಎಂದು ಹೇಳಿದನು.


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದ ಜನರಿಂದಲೂ ನಿನಗೆ ಕೇಡಾಗದಂತೆ ಕಾಪಾಡುವೆನು. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತಿದ್ದೇನೆ.


ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.


ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.


“ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು.


ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


“ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.


ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”


ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.


ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ನೆಬೂಕದ್ನೆಚ್ಚರನು ನೆಬೂಜರದಾನನಿಗೆ ಯೆರೆಮೀಯನ ಬಗ್ಗೆ ಕೆಲವು ಆಜ್ಞೆಗಳನ್ನು ಕೊಟ್ಟನು. ನೆಬೂಜರದಾನನು ನೆಬೂಕದ್ನೆಚ್ಚರನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಆ ಆಜ್ಞೆ ಹೀಗಿತ್ತು:


ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು