Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:10 - ಪರಿಶುದ್ದ ಬೈಬಲ್‌

10 ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:10
69 ತಿಳಿವುಗಳ ಹೋಲಿಕೆ  

“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?


ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!


ಯೆಹೋವನು ಸದಾಕಾಲವೂ ರಾಜನಾಗಿರುವನು. ಆತನು ತನ್ನ ದೇಶದಿಂದ ಕೆಡುಕರನ್ನು ತೆಗೆದುಹಾಕುವನು.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


“ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.


ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.


ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.


“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.


“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.


ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.


ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.


ಯೆಹೋವನೇ, ನಿನ್ನ ರಾಜ್ಯವು ಶಾಶ್ವತವಾಗಿದೆ. ನೀನು ಎಂದೆಂದಿಗೂ ಆಳುವೆ.


ಯಾಕೋಬನ ದೇವರೂ ಒಡೆಯನೂ ಆಗಿರುವ ಯೆಹೋವನ ಎದುರಿನಲ್ಲಿ ಭೂಮಿಯು ನಡುಗಿತು.


ಆತನು ಭೂಮಿಯ ಕಡೆಗೆ ನೋಡಿದರೆ ಸಾಕು, ಭೂಮಿಯು ನಡುಗುವುದು; ಆತನು ಬೆಟ್ಟಗಳನ್ನು ಮುಟ್ಟಿದರೆ ಸಾಕು, ಅವು ಜ್ವಾಲಾಮುಖಿಗಳಾಗುತ್ತವೆ.


ಆತನ ಮಿಂಚು ಆಕಾಶದಲ್ಲಿ ಹೊಳೆಯುತ್ತದೆ. ಜನರು ಅದನ್ನು ನೋಡಿ ಭಯಗೊಂಡಿದ್ದಾರೆ.


ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ. ಆದಿಯಿಂದಲೂ ಇರುವಾತನು ನೀನೊಬ್ಬನೇ!


ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.


ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು. ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು. ಭೂಮಿಯು ಅಲ್ಲಾಡಿ ಕಂಪಿಸಿತು.


ಆತನು ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುವನು; ಅದರ ಅಸ್ತಿವಾರಗಳನ್ನು ನಡುಗಿಸುವನು.


ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.


ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.


“ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು.


ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಆದರೆ ಯೇಸು ಮೌನವಾಗಿದ್ದನು. ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.


ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.


ಪರ್ವತಗಳು ನಿನ್ನನ್ನು ನೋಡಿ ನಡುಗಿದವು. ನೆಲದ ಮೇಲಿಂದ ನೀರು ಹರಿದುಹೋಯಿತು. ಭೂಮಿಯ ಮೇಲೆ ತನಗಿದ್ದ ಶಕ್ತಿ ಹೋದದ್ದನ್ನು ನೋಡಿ ಸಮುದ್ರವು ಗಟ್ಟಿಯಾಗಿ ಶಬ್ದ ಮಾಡಿತು.


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.


ದೇವರು ಅಚ್ಚರಿಗೊಳಿಸುವ ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರು ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರ ಸಾಮ್ರಾಜ್ಯವು ಶಾಶ್ವತವಾದದ್ದು. ದೇವರ ಆಳ್ವಿಕೆಯು ಎಲ್ಲಾ ತಲೆಮಾರುಗಳಲ್ಲಿಯೂ ಮುಂದುವರೆಯುವುದು.


ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.


ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!


ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.


ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು:


ಅಬ್ರಹಾಮನು ಬೇರ್ಷೆಬದಲ್ಲಿ ವಿಶೇಷವಾದ ಒಂದು ಮರವನ್ನು ನೆಟ್ಟನು. ಆ ಸ್ಥಳದಲ್ಲಿ ಅವನು ಸದಾಕಾಲ ಜೀವಿಸುವ ದೇವರಾದ ಯೆಹೋವನಿಗೆ ಪ್ರಾರ್ಥಿಸಿದನು.


ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.


ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.


ಭೂಮಿಯೇ ಕಂಪಿಸಿತು. ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು.


ಬೆಟ್ಟಗಳು ಹುಟ್ಟುವುದಕ್ಕಿಂತ ಮೊದಲಿಂದಲೂ ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲಿನಿಂದಲೂ ನೀನೇ ದೇವರು. ಯಾವಾಗಲೂ ದೇವರಾಗಿದ್ದಾತನು ನೀನೇ! ಯಾವಾಗಲೂ ದೇವರಾಗಿರುವಾತನೂ ನೀನೇ!


ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.


“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


ನೀನು ಹೀಗೆ ಮಾಡಿದರೆ ನನ್ನ ಹೆಸರಿನ ಮೇಲೆ ಪ್ರಮಾಣ ಮಾಡಲು ಶಕ್ತಳಾಗುವೆ. ‘ಹಾದು, ಯೆಹೋವನಾಣೆ’ ಎಂದು ಹೇಳಶಕ್ತಳಾಗುವೆ. ನೀನು ಆ ಪದಗಳನ್ನು ಸತ್ಯವಾಗಿಯೂ ಪ್ರಾಮಾಣಿಕವಾಗಿಯೂ ಸರಿಯಾಗಿ ಉಪಯೋಗಿಸಲು ಸಾಧ್ಯವಾಗುತ್ತದೆ. ನೀನು ಹೀಗೆ ಮಾಡಿದರೆ, ಎಲ್ಲಾ ಜನಾಂಗಗಳು ಯೆಹೋವನ ಆಶೀರ್ವಾದವನ್ನು ಪಡೆಯುತ್ತವೆ. ಆತನ ಕಾರ್ಯಗಳಿಗಾಗಿ ಆತನಿಗೆ ಸ್ತೋತ್ರ ಮಾಡುತ್ತವೆ.”


ನಾನು ಪರ್ವತಗಳ ಕಡೆಗೆ ನೋಡಿದೆ, ಅವುಗಳು ನಡುಗುತ್ತಿದ್ದವು. ಎಲ್ಲಾ ಬೆಟ್ಟಗಳು ಅದರುತ್ತಿದ್ದವು.


ಬಾಬಿಲೋನ್ ಪತನವಾಗುವುದು. ಆ ಪತನವು ಭೂಮಂಡಲವನ್ನು ಅಲುಗಾಡಿಸುವುದು. ಎಲ್ಲಾ ಜನಾಂಗಗಳ ಜನರು ಬಾಬಿಲೋನಿನ ವಿನಾಶದ ವಿಷಯವನ್ನು ಕೇಳುವರು.”


ನೋವಿನಿಂದಲೋ ಎಂಬಂತೆ ಭೂಮಿಯು ನಡುಗುತ್ತದೆ ಮತ್ತು ಹೊರಳಾಡುತ್ತದೆ. ಯೆಹೋವನು ತಾನು ಯೋಚಿಸಿದಂತೆ ಬಾಬಿಲೋನಿಗೆ ಮಾಡಿದಾಗ ಅದು ನಡುಗುತ್ತದೆ. ಬಾಬಿಲೋನನ್ನು ಯಾರೂ ವಾಸಮಾಡದ ಮರುಭೂಮಿಯನ್ನಾಗಿ ಮಾಡಬೇಕೆಂಬುದು ಯೆಹೋವನ ಯೋಜನೆ.


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.


ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.


ದೇವರೇ, ಬಹುಕಾಲದಿಂದ ನೀನು ನಮ್ಮರಾಜ. ಈ ದೇಶದಲ್ಲಿ ಅನೇಕ ಯುದ್ಧಗಳನ್ನು ಗೆಲ್ಲಲು ನೀನು ನಮಗೆ ಸಹಾಯಮಾಡಿದೆ.


ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.


ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.


ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು