5 ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”
5 ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”
5 ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.
ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.
ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.
“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.
ಯೆಹೋವನು ಅಮಚ್ಯನ ಮೇಲೆ ಸಿಟ್ಟುಗೊಂಡನು. ಅವನ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ಅಮಚ್ಯನೇ, ಆ ಜನರು ಪೂಜಿಸುವ ವಿಗ್ರಹಗಳಿಗೇಕೆ ನೀನು ಪೂಜೆ ಮಾಡುವೆ? ತಮ್ಮನ್ನು ಪೂಜಿಸುವವರನ್ನು ಆ ದೇವರುಗಳು ನಿನ್ನಿಂದ ಕಾಪಾಡಲಾರದೆ ಹೋದವು” ಎಂದು ಹೇಳಿದನು.