Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:10 - ಪರಿಶುದ್ದ ಬೈಬಲ್‌

10 ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:10
36 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಈ ಮಾತುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು. “ನೀನು ಮಾಡಿರುವದನ್ನು ನಾನೂ ನಿನಗೆ ಮಾಡುವೆನು. ನೀನು ನಿನ್ನ ಮದುವೆ ಒಡಂಬಡಿಕೆಯನ್ನು ಮುರಿದುಬಿಟ್ಟೆ. ನಮ್ಮ ಒಡಂಬಡಿಕೆಗೆ ನೀನು ಮಹತ್ವ ಕೊಡಲಿಲ್ಲ.


ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.


ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.


ಆದರೆ ಇಸ್ರೇಲರು ನ್ಯಾಯಾಧೀಶರ ಮಾತನ್ನು ಕೇಳಲಿಲ್ಲ. ಅವರು ಯೆಹೋವನಿಗೆ ನಂಬಿಗಸ್ತರಾಗಿರದೆ ಬೇರೆಬೇರೆ ದೇವರುಗಳನ್ನು ಅನುಸರಿಸಿದರು. ಹಿಂದೆ ಇಸ್ರೇಲರ ಪೂರ್ವಿಕರು ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಿದ್ದರು. ಆದರೆ ಈಗ ಇಸ್ರೇಲರು ಬದಲಾಗಿ ಯೆಹೋವನ ಆಜ್ಞಾಪಾಲನೆಯನ್ನು ನಿಲ್ಲಿಸಿಬಿಟ್ಟರು.


ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.


ಕೆಲವರು ಯೆಹೋವನಾದ ನನ್ನಿಂದ ತೊಲಗಿಹೋದರು. ನನ್ನನ್ನು ಹಿಂಬಾಲಿಸುವುದನ್ನು ನಿಲ್ಲಿಸಿಬಿಟ್ಟರು. ಅವರು ಯೆಹೋವನನ್ನು ಸಹಾಯಕ್ಕಾಗಿ ಬೇಡುವಂತದ್ದನ್ನು ನಿಲ್ಲಿಸಿದರು. ಅವರನ್ನು ನಾನು ಅವರ ಸ್ಥಳಗಳಿಂದ ತೆಗೆದುಹಾಕುವೆನು.”


ಆದರೆ ಜನರು ಆದಾಮನಂತೆ ಒಡಂಬಡಿಕೆಯನ್ನು ಮುರಿದುಹಾಕಿದರು. ಅವರ ದೇಶದಲ್ಲಿ ಅವರು ನನಗೆ ದ್ರೋಹಿಗಳಾದರು.


ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.


ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.


“ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.


ನೀವು ನನ್ನ ಕಟ್ಟಳೆಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗದಿದ್ದರೆ, ಆಗ ನೀವು ನನ್ನ ಒಡಂಬಡಿಕೆಯನ್ನು ಮುರಿದವರಾಗುತ್ತೀರಿ.


ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.


“ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಬೇಕು? ನಿನ್ನ ನಂಬಿಗಸ್ತಿಕೆಯು ಮುಂಜಾನೆಯ ಮಂಜಿನಂತಿದೆ. ನಿನ್ನ ನಂಬಿಗಸ್ತಿಕೆಯು ಇಬ್ಬನಿಯಂತಿದೆ. ಅದು ಬೇಗನೆ ಇಲ್ಲದೆಹೋಗುವದು.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಇಸ್ರೇಲಿನ ಜನರು ದುಷ್ಕೃತ್ಯಗಳನ್ನು ಮಾಡಿದರು ಮತ್ತು ಸುಳ್ಳುದೇವರಾದ ಬಾಳನ ಸೇವೆ ಮಾಡಿದರು. ಯೆಹೋವನು ಇಸ್ರೇಲರ ಈ ದುಷ್ಕೃತ್ಯಗಳನ್ನು ನೋಡಿದನು.


ಆದ್ದರಿಂದ ನೀನು ಅವರಿಗೆ ಹೀಗೆ ಹೇಳಬೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನ್ನು ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.


ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.


ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.


ಆದರೆ ಆ ಜನರು ಪ್ರವಾದಿಗಳ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಅವರು ಆ ಪ್ರವಾದಿಗಳ ಕಡೆಗೆ ಗಮನ ಕೊಡಲಿಲ್ಲ. ಆ ಜನರು ತಮ್ಮ ದುಷ್ಟತನವನ್ನು ನಿಲ್ಲಿಸಲಿಲ್ಲ. ಅವರು ಬೇರೆ ದೇವರುಗಳಿಗೆ ಬಲಿ ಕೊಡುವುದನ್ನು ನಿಲ್ಲಿಸಲಿಲ್ಲ.


“ನೀನು ನಮಗೆ ತಿಳಿಸಿದ ಯೆಹೋವನ ಸಂದೇಶವನ್ನು ಕೇಳಿಸಿಕೊಳ್ಳುವದಿಲ್ಲ.


ಜೆರುಸಲೇಮಿನ ನಿವಾಸಿಗಳು ನನ್ನ ಆಜ್ಞೆಗಳಿಗೆ ದಂಗೆ ಎದ್ದಿದ್ದಾರೆ. ಅವರು ಇತರ ಜನಾಂಗಗಳಿಗಿಂತ ಕೆಟ್ಟವರು. ಅವರು ತಮ್ಮ ಸುತ್ತಲಿರುವ ಬೇರೆ ದೇಶಗಳಿಗಿಂತ ಹೆಚ್ಚಾಗಿ ನನ್ನ ಕಟ್ಟಳೆಗಳನ್ನು ಉಲ್ಲಂಬಿಸಿದ್ದಾರೆ. ಅವರು ನನ್ನ ಆಜ್ಞೆಗಳನ್ನು ತಿರಸ್ಕರಿಸಿದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ.”


ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.


ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.


ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.


ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು