Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:12 - ಪರಿಶುದ್ದ ಬೈಬಲ್‌

12 ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಬಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಜುದೇಯದ ನಗರದವರೂ ಜೆರುಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಧೂಪಾರತಿಯೆತ್ತಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು. ಆದರೆ ಅಂಥ ಕೇಡಿನ ಕಾಲದಲ್ಲಿ ಆ ದೇವತೆಗಳಿಂದ ಅವರಿಗೆ ಯಾವ ರಕ್ಷಣೆಯೂ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೂದದ ಪಟ್ಟಣಗಳವರೂ ಯೆರೂಸಲೇವಿುನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:12
10 ತಿಳಿವುಗಳ ಹೋಲಿಕೆ  

ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.


ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ “ಬಂಡೆ” ಎಲ್ಲಿ?


“ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.


ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.


ನೀವು ಆ ದೇವರುಗಳನ್ನು ಪೂಜಿಸಲು ಇಷ್ಟಪಡುತ್ತೀರಿ. ಆದ್ದರಿಂದ ಹೋಗಿ ಅವರನ್ನೇ ಸಹಾಯಕ್ಕಾಗಿ ಮೊರೆಯಿಡಿ. ನೀವು ಕಷ್ಟದಲ್ಲಿರುವಾಗ ಆ ದೇವರುಗಳೇ ನಿಮ್ಮನ್ನು ರಕ್ಷಿಸಲಿ” ಎಂದು ಉತ್ತರಿಸಿದನು.


ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ಆ ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ.


ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.


ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.


ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು