Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:15 - ಪರಿಶುದ್ದ ಬೈಬಲ್‌

15 “ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸಿಯಾವೇ? ಇಂಥವುಗಳ ಮೂಲಕ ತಪ್ಪಿಸಿಕೊಂಡೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:15
29 ತಿಳಿವುಗಳ ಹೋಲಿಕೆ  

ಅವರಿಗೆ ಕೆಟ್ಟದ್ದನ್ನು ಮಾಡುವುದರಲ್ಲೇ ಸಂತೋಷ; ಕೆಡುಕರ ಕೆಟ್ಟಕಾರ್ಯಗಳಲ್ಲೇ ಆನಂದ.


ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.


ಆದರೆ ನೀವೀಗ ಜಂಬಗಾರರಾಗಿ ಹೊಗಳಿಕೊಳ್ಳುತ್ತೀರಿ. ನಿಮ್ಮ ಹೊಗಳಿಕೆಯೆಲ್ಲವೂ ಕೆಟ್ಟದ್ದು.


ಪ್ರೀತಿಯು ಕೆಟ್ಟದ್ದರ ಬಗ್ಗೆ ಸಂತೋಷಪಡದೆ ಸತ್ಯದ ಬಗ್ಗೆ ಸಂತೋಷಪಡುತ್ತದೆ.


ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.


ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.


“ಆಗ ರಾಜನು ಜನರನ್ನೆಲ್ಲ ನೋಡಲು ಒಳಗೆ ಬಂದನು. ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲದ ಒಬ್ಬ ಮನುಷ್ಯನನ್ನು ರಾಜನು ಕಂಡು,


ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.


“ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.


ಇಸ್ರೇಲ್ ಎಂಬಾಕೆಯು ನನಗೆ ವಿಶ್ವಾಸದ್ರೋಹ ಮಾಡಿದ್ದಳು. ನಾನು ಏಕೆ ಹೊರಗೆ ಹಾಕಿದೆ ಎಂಬುದು ಅವಳಿಗೆ ಗೊತ್ತಿತ್ತು. ಅವಳ ಜಾರತನ ಎಂಬ ಪಾಪದ ಬಗ್ಗೆ ನನಗೆ ತಿಳಿದಿದೆ ಎಂದು ಇಸ್ರೇಲಳಿಗೆ ಗೊತ್ತಾಗಿತ್ತು. ಆದರೆ ಅದರಿಂದ ಅವಳ ವಂಚಕಳಾದ ಸೋದರಿಗೆ ಭಯವಾಗಲಿಲ್ಲ. ಯೆಹೂದ ಭಯಪಡಲಿಲ್ಲ. ಆಕೆಯು ಸಹ ವೇಶ್ಯೆಯರಂತೆ ವರ್ತಿಸಿದಳು.


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


ದೇವರ ಉಪದೇಶವನ್ನು ತಿರಸ್ಕರಿಸುವವನ ಪ್ರಾರ್ಥನೆಯನ್ನು ದೇವರೂ ತಿರಸ್ಕರಿಸುವನು.


ಮತ್ತೊಬ್ಬನನ್ನು ಮೋಸಗೊಳಿಸಿ ತಾನು ಕೇವಲ ತಮಾಷೆಮಾಡಿದ್ದಾಗಿ ಹೇಳುವವನು ಉರಿಯುವ ಬಾಣಗಳನ್ನು ಆಕಾಶದ ಕಡೆಗೆ ಎಸೆದು ಬೇರೊಬ್ಬನನ್ನು ಆಕಸ್ಮಿಕವಾಗಿ ಕೊಲ್ಲುವ ಹುಚ್ಚನಂತಿರುವನು.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ಅವಿವೇಕಿಯು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸುತ್ತಾನೆ. ವಿವೇಕಿಯು ಜ್ಞಾನದಲ್ಲಿ ಸಂತೋಷಿಸುತ್ತಾನೆ.


ದೇವರು ದುಷ್ಟರಿಗೆ ಹೀಗೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.


ನಿನ್ನ ಮಹಾಶಕ್ತಿಯಿಂದ ನಮ್ಮನ್ನು ರಕ್ಷಿಸು! ನಮ್ಮ ಪ್ರಾರ್ಥನೆಗೆ ಉತ್ತರನೀಡಿ ನಿನ್ನ ಪ್ರಿಯರನ್ನು ರಕ್ಷಿಸು!


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


“ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಇದು ಯೆಹೋವನಿಂದ ಬಂದ ಸಂದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು