Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:22 - ಪರಿಶುದ್ದ ಬೈಬಲ್‌

22 ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:22
9 ತಿಳಿವುಗಳ ಹೋಲಿಕೆ  

ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


“ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”


ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು.


ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು. ಆ ಕಾಲದಲ್ಲಿ ದಮಸ್ಕದ ಎಲ್ಲಾ ಸೈನಿಕರು ಕೊಲ್ಲಲ್ಪಡುವರು.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು