Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:5 - ಪರಿಶುದ್ದ ಬೈಬಲ್‌

5 “ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:5
16 ತಿಳಿವುಗಳ ಹೋಲಿಕೆ  

ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.


ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.


ನಮ್ಮನ್ನು ಶೋಧನೆಗೆ ಒಳಪಡಿಸದೆ ಕೆಡುಕನಿಂದ (ಸೈತಾನನಿಂದ) ನಮ್ಮನ್ನು ರಕ್ಷಿಸು.’


ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.


ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.


ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು.


“ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.


ಇಸ್ರೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ಕೊಟ್ಟಿರುವ ನಿನ್ನ ವಾಗ್ದಾನವು ನೆರವೇರಲಿ.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.


ನಾನು ಈ ಜನರಿಗೂ ಮತ್ತು ಈ ಸ್ಥಳಕ್ಕೂ ಹೀಗೆ ಮಾಡುತ್ತೇನೆ. ನಾನು ಈ ನಗರವನ್ನು ತೋಫೆತಿನಂತೆ ಮಾಡುತ್ತೇನೆ’ ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು