Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:13 - ಪರಿಶುದ್ದ ಬೈಬಲ್‌

13 ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:13
19 ತಿಳಿವುಗಳ ಹೋಲಿಕೆ  

ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”


ನೀವು ಬೀಜ ಬಿತ್ತುವಿರಿ, ಆದರೆ ಪೈರು ಕೊಯ್ಯುವುದಿಲ್ಲ. ಆಲೀವ್ ಕಾಯಿಗಳನ್ನು ಗಾಣದಲ್ಲಿ ಹಾಕಿ ಎಣ್ಣೆ ತೆಗೆಯುವಿರಿ. ಆದರೆ ನಿಮಗೆ ಎಣ್ಣೆಯೇ ಸಿಗುವದಿಲ್ಲ. ನೀವು ದ್ರಾಕ್ಷಿಹಣ್ಣುಗಳನ್ನು ತೊಟ್ಟಿಯಲ್ಲಿ ಹಾಕಿ ತುಳಿಯುವಿರಿ, ಆದರೆ ಕುಡಿಯಲು ದ್ರಾಕ್ಷಾರಸವೇ ಸಿಗುವದಿಲ್ಲ.


“ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


ಆ ಜನರು ಕಟ್ಟುವ ಪ್ರತಿಯೊಂದನ್ನೂ ಸರ್ವಶಕ್ತನಾದ ಯೆಹೋವನು ಬೆಂಕಿಯಿಂದ ನಾಶಮಾಡುವ ತೀರ್ಮಾನವನ್ನು ಮಾಡಿರುತ್ತಾನೆ. ಅವರು ಮಾಡಿದ ಕೆಲಸವೆಲ್ಲವೂ ವ್ಯರ್ಥವಾಗುವದು.


ನಾನು ನೋಡಿದಾಗ ಫಲವತ್ತಾದ ಭೂಮಿಯು ಮರಳುಗಾಡಾಗಿತ್ತು. ಆ ಪ್ರದೇಶದ ಎಲ್ಲಾ ನಗರಗಳು ಹಾಳಾಗಿ ಹೋಗಿದ್ದವು. ಯೆಹೋವನು ತನ್ನ ಭಯಂಕರವಾದ ಕೋಪದಿಂದ ಇದನ್ನು ಮಾಡಿದನು.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ನೀವು ಕಷ್ಟಪಟ್ಟು ದುಡಿದರೂ ನಿಮಗೆ ಪ್ರಯೋಜನವಿರುವುದಿಲ್ಲ. ನಿಮ್ಮ ಭೂಮಿ ಯಾವ ಬೆಳೆಗಳನ್ನೂ ಫಲಿಸುವುದಿಲ್ಲ; ನಿಮ್ಮ ಮರಗಳೂ ಫಲಗಳನ್ನು ಬಿಡುವುದಿಲ್ಲ.


ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ಆತನು ತನ್ನ ಜನರಿಗೆ ವಿರೋಧವಾಗಿ ತನ್ನ ಕೋಪವನ್ನು ತೋರಿದನು. ಯುದ್ಧದಲ್ಲಿ ಅವರಿಗೆ ಮರಣವಾಗುವಂತೆ ಮಾಡಿದನು.


ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ದೊಡ್ಡ ಸುಗ್ಗಿಯನ್ನು ಎದುರು ನೋಡುತ್ತಿದ್ದೀರಿ. ಆದರೆ ನೀವು ಪೈರು ಕೊಯ್ಯಲು ಹೋಗುವಾಗ ಸ್ಪಲ್ಪವೇ ಕಾಳು ಇರುವುದು. ಅದನ್ನು ನೀವು ಮನೆಗೆ ತಂದಾಗ ನಾನು ಗಾಳಿಯನ್ನು ಕಳುಹಿಸಿ ಅವುಗಳನ್ನು ಹಾರಿಸಿಬಿಡುವೆನು. ಹೀಗೆಲ್ಲಾ ಯಾಕೆ ಆಗುತ್ತಿದೆ? ಯಾಕೆಂದರೆ, ನನ್ನ ಆಲಯವು ಇನ್ನೂ ಹಾಳುಬಿದ್ದಿದ್ದರೂ ನೀವೆಲ್ಲರೂ ನಿಮ್ಮ ನಿಮ್ಮ ಮನೆಗಳನ್ನು ನೋಡಿಕೊಳ್ಳುವುದಕ್ಕಾಗಿ ಓಡಿಹೋಗುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು