Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:16 - ಪರಿಶುದ್ದ ಬೈಬಲ್‌

16 ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು, ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:16
36 ತಿಳಿವುಗಳ ಹೋಲಿಕೆ  

ಎಲ್ಲಾ ನ್ಯಾಯನೀತಿಗಳು ಇಲ್ಲವಾಗಿವೆ. ನಮ್ಮ ಬಳಿಯಲ್ಲಿ ಅಂಧಕಾರವು ಇರುವದರಿಂದ ನಾವು ಬೆಳಕಿಗಾಗಿ ಕಾಯಬೇಕಾಗಿದೆ. ಪ್ರಕಾಶಮಾನವಾದ ಬೆಳಕಿಗಾಗಿ ಆಶಿಸುತ್ತಿರುವಾಗ ನಮಗೆ ಸಿಕ್ಕಿದ್ದು ಕೇವಲ ಕತ್ತಲೆಯೇ.


ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.


ಕತ್ತಲೆಯು ಈಗ ಭೂಮಿಯನ್ನು ಕವಿದಿದೆ. ಜನರು ಕತ್ತಲೆಯಲ್ಲಿದ್ದಾರೆ. ಆದರೆ ಯೆಹೋವನ ಪ್ರಕಾಶವು ನಿನ್ನ ಮೇಲಿರುವದು. ಆತನ ಮಹಿಮೆಯು ನಿನ್ನ ಮೇಲೆ ಬರುವದು.


ಆದ್ದರಿಂದ ಸಮುದ್ರವು ಭೋರ್ಗರೆಯವಂತೆ ಆ ದಿನದಲ್ಲಿ ಗರ್ಜನೆಯಿರುವುದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ.


ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.


ಆದ್ದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ. ಆಗ ಅವರು ಕತ್ತಲಲ್ಲಿ ನಡೆಯಬೇಕಾಗುವುದು. ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. ಆ ಪ್ರವಾದಿಗಳು ಮತ್ತು ಯಾಜಕರು ಕತ್ತಲಲ್ಲಿ ಬೀಳುವರು. ನಾನು ಅವರಿಗೆ ಕೇಡನ್ನು ಬರಮಾಡಿ ಅವರನ್ನು ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ.


ನಾನು ಭೂಮಿಯ ಕಡೆಗೆ ನೋಡಿದೆ, ಭೂಮಿಯು ಬರಿದಾಗಿತ್ತು. ಭೂಮಿಯ ಮೇಲೇನೂ ಇರಲಿಲ್ಲ. ನಾನು ಆಕಾಶದ ಕಡೆಗೆ ನೋಡಿದೆ, ಅದರ ಬೆಳಕು ಹೋಗಿಬಿಟ್ಟಿತ್ತು.


ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದುಬಿಟ್ಟಿರುವೆ.


ಹೀಗೆ ನಿಮ್ಮ ದೇಶವನ್ನು ನಾಶಗೊಳಿಸುತ್ತಿರುವ ಗಡ್ಡೆಗಳ, ಇಲಿಗಳ ಮಾದರಿಗಳನ್ನು ಮಾಡಿಸಿರಿ. ಇಸ್ರೇಲರ ದೇವರಿಗೆ ಚಿನ್ನದ ಆ ಮಾದರಿಗಳನ್ನು ಕಾಣಿಕೆಯಾಗಿ ಸಲ್ಲಿಸಿರಿ. ಆಗ ಇಸ್ರೇಲರ ದೇವರು ನಿಮ್ಮನ್ನೂ ನಿಮ್ಮ ದೇವರುಗಳನ್ನೂ ನಿಮ್ಮ ದೇಶವನ್ನೂ ಶಿಕ್ಷಿಸುವುದನ್ನು ನಿಲ್ಲಿಸಬಹುದು.


ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.


ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ.


ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.


ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು.


ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.


ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.


ದೇವಜನರಲ್ಲಿ ಕೆಲವರು ಸೆರೆಯಾಳುಗಳಾಗಿದ್ದರು; ಕಾರ್ಗತ್ತಲೆಯ ಸೆರೆಮನೆಗಳಲ್ಲಿ ಬಂಧಿತರಾಗಿದ್ದರು.


ಆತನು ಅವರನ್ನು ಕಾರ್ಗತ್ತಲೆಯ ಸೆರೆಮನೆಗಳಿಂದ ಹೊರತಂದನು; ಕಟ್ಟಿದ ಹಗ್ಗಗಳನ್ನು ಕಿತ್ತುಹಾಕಿದನು.


‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.


“ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.


“ನನ್ನ ಜನರು ತಪ್ಪಿಸಿಕೊಂಡ ಕುರಿಗಳಂತಿದ್ದಾರೆ. ಅವರ ಕುರುಬರು ಅವರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಅವರ ನಾಯಕರುಗಳು ಅವರನ್ನು ಬೆಟ್ಟಗಳಲ್ಲಿ ಅಲೆಯುವಂತೆ ಮಾಡಿದ್ದಾರೆ. ಅವರ ವಿಶ್ರಾಂತಿಸ್ಥಾನವನ್ನು ಅವರು ಮರೆತುಬಿಟ್ಟಿದ್ದಾರೆ.


ಅವರ ಹೃದಯಗಳು ಭಯದಿಂದ ಕರಗಿಹೋಗುವುದು. ಬಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದ್ವಾರದ ಬಳಿಯಲ್ಲಿದ್ದು ಈ ಖಡ್ಗವು ಬಹು ಜನರನ್ನು ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನ್ನು ಕೊಲ್ಲುವುದಕ್ಕಾಗಿ ಅದು ಹೊಳಪುಮಾಡಲ್ಪಟ್ಟಿದೆ.


ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.


“ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಬೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು.


ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.


ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ.


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು