Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:18 - ಪರಿಶುದ್ದ ಬೈಬಲ್‌

18 ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:18
30 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದುಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತುಹೋಗುವಿರಿ.


ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.


ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ನೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ನೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು.


ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.


“ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.


ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.


ಆದ್ದರಿಂದ ದೇವರ ಶಕ್ತಿಯುತವಾದ ಹಸ್ತದ ಕೆಳಗೆ ನಮ್ರತೆಯಿಂದಿರಿ. ಯೋಗ್ಯಕಾಲವು ಸಮೀಪಿಸಿದಾಗ ಆತನು ನಿಮ್ಮನ್ನು ಮೇಲೆತ್ತುವನು.


ಪ್ರಭುವಿನ ಎದುರಿನಲ್ಲಿ ದೀನರಾಗಿರಿ, ಆತನು ನಿಮ್ಮನ್ನು ಉನ್ನತ ಮಟ್ಟಕ್ಕೆ ತರುತ್ತಾನೆ.


ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.


ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.


ನಗರದ ಹೆಬ್ಬಾಗಿಲ ಬಳಿಯಲ್ಲಿ ಜನರು ಸೇರಿ ಬರುವಾಗ ರೋಧನವೂ ಶೋಕವೂ ಇರುತ್ತವೆ. ಇದ್ದುದನ್ನೆಲ್ಲಾ ಕಳೆದುಕೊಂಡ ಸ್ತ್ರೀಯಂತೆ ಜೆರುಸಲೇಮು ಸರ್ವವನ್ನೂ ಕಳೆದುಕೊಂಡು ನೆಲದ ಮೇಲೆ ಕುಳಿತು ರೋಧಿಸುವಳು.


ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.


ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!


ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು.


ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.


ರುಮಾಲುಗಳನ್ನು, ಸೊಂಟಪಟ್ಟಿಯನ್ನು, ಪರಿಮಳದ್ರವ್ಯವನ್ನು, ತಾಯಿತಿಗಳನ್ನು,


(ರಾಜನಾದ ಯೆಹೋಯಾಕೀನನನ್ನು, ರಾಜಮಾತೆಯನ್ನು, ಯೆಹೂದದ ಮತ್ತು ಜೆರುಸಲೇಮಿನ ಅಧಿಕಾರಿಗಳನ್ನು, ಮುಂದಾಳುಗಳನ್ನು, ಬಡಗಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ತೆಗೆದುಕೊಂಡು ಹೋದ ಮೇಲೆ ಈ ಪತ್ರವನ್ನು ಕಳಿಸಲಾಯಿತು.)


ಆ ರಾಜ್ಯಾಧಿಕಾರಿಗಳು ಆ ಸುರುಳಿಯಲ್ಲಿ ಬರೆದ ಎಲ್ಲಾ ಸಂದೇಶಗಳನ್ನು ಕೇಳಿ ಭಯಪಟ್ಟು ಒಬ್ಬರ ಮುಖವನ್ನೊಬ್ಬರು ನೋಡಿದರು. ಅವರು ಬಾರೂಕನಿಗೆ, “ನಾವು ರಾಜನಾದ ಯೆಹೋಯಾಕೀಮನಿಗೆ ಈ ಸುರುಳಿಯಲ್ಲಿರುವ ಸಂದೇಶಗಳ ಬಗ್ಗೆ ತಿಳಿಸಬೇಕು” ಎಂದರು.


ಚೀಯೋನಿನ ಮಗಳ ಸೌಂದರ್ಯವು ಹೊರಟುಹೋಗಿದೆ. ಅವಳ ರಾಜಕುಮಾರರು ಹುಲ್ಲುಗಾವಲನ್ನು ಕಂಡುಕೊಂಡಿಲ್ಲದ ಜಿಂಕೆಯಂತಾಗಿದ್ದಾರೆ. ಅವರು ಬಲಹೀನರಾಗಿ ಓಡಿಹೋದರು. ಬೆನ್ನಟ್ಟಿ ಬಂದ ಜನರಿಗೆ ಬೆಂಗೊಟ್ಟು ಓಡಿಹೋಗಿದ್ದಾರೆ.


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.


ನಿನಗೆ ಮೂಗುತಿ, ಕಿವಿಗೆ ಕಿವಿಯುಂಗುರಗಳನ್ನು ಮತ್ತು ಒಂದು ಅಂದವಾದ ಕಿರೀಟವನ್ನು ಧರಿಸಲು ಕೊಟ್ಟೆನು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


ಅವರು ನಾರುಮಡಿಯ ಮುಂಡಾಸನ್ನು ಧರಿಸಿಕೊಳ್ಳುವರು. ಅದೇ ಬಟ್ಟೆಯ ಚಡ್ಡಿಯನ್ನೂ ಧರಿಸುವರು. ಅವರಿಗೆ ಬೆವರು ಬರಿಸುವ ಯಾವ ಬಟ್ಟೆಯಾಗಲಿ ಅವರು ಧರಿಸುವದಿಲ್ಲ.


“ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.


ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು