Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:19 - ಪರಿಶುದ್ದ ಬೈಬಲ್‌

19 ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದಕ್ಷಿಣದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:19
21 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.


ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಬರು ಅವುಗಳನ್ನು ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನ್ನು ಎಣಿಸುತ್ತಿರುವರು.”


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.


ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.


ಅವರು ಆ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಲಿ. ಯೆಹೂದದ ಜನರು ದಕ್ಷಿಣದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಯೋಸೇಫನ ಜನರು ಉತ್ತರದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ.


“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:


ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ಅತಿ ಕಷ್ಟಗಳನ್ನು ಅನುಭವಿಸಿದ ಮೇಲೆ ಯೆಹೂದ ಬಂಧನಕ್ಕೊಳಗಾಗಿದ್ದಾಳೆ. ಅತಿ ಶ್ರಮಪಟ್ಟ ಮೇಲೆಯೂ ಅವಳು ಸೆರೆ ಒಯ್ಯಲ್ಪಟ್ಟಿದ್ದಾಳೆ. ಯೆಹೂದ ಬೇರೆ ಜನಾಂಗಗಳ ಜೊತೆಯಲ್ಲಿ ವಾಸಿಸುತ್ತಾಳೆ. ಆದರೆ ಅವಳಿಗೆ ವಿಶ್ರಾಂತಿ ಸಿಕ್ಕಿಲ್ಲ. ಅವಳನ್ನು ಬೆನ್ನಟ್ಟಿದ ಜನರು ಆಕೆಯು ಬಳಲಿ ಹೋಗಿದ್ದಾಗಲೇ ಅವಳನ್ನು ಹಿಡಿದುಕೊಂಡರು.


ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”


ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.


ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)


ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’” ಇದು ಯೆಹೋವನ ಸಂದೇಶ.


ನೆಬೂಕದ್ನೆಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಏಳನೇ ವರ್ಷದಲ್ಲಿ ಯೆಹೂದದಿಂದ ಒಯ್ಯಲ್ಪಟ್ಟ ಜನರು 3,023.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು