ಯೆರೆಮೀಯ 13:3 - ಪರಿಶುದ್ದ ಬೈಬಲ್3 ಆಗ ಎರಡನೇ ಸಲ ನನಗೆ ಯೆಹೋವನ ಸಂದೇಶ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಮೇಲೆ ಯೆಹೋವನ ಮಾತು ಎರಡನೆಯ ಬಾರಿ ನನಗೆ ಕೇಳಿ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-4 ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಿಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂದಿನೊಳಗೆ ಬಚ್ಚಿಡು,” ಎಂಬುದಾಗಿ ಸರ್ವೇಶ್ವರ ಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3-4 ಆಮೇಲೆ - ನೀನು ಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು ಎಂಬದಾಗಿ ಯೆಹೋವನ ಎರಡನೆಯ ಮಾತು ನನಗೆ ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು, ಅಧ್ಯಾಯವನ್ನು ನೋಡಿ |
ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.