Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:16 - ಪರಿಶುದ್ದ ಬೈಬಲ್‌

16 ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮಖಡ್ಗಗಳ ದೆಸೆಯಿಂದ ಯೆರೂಸಲೇವಿುನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡರುಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:16
23 ತಿಳಿವುಗಳ ಹೋಲಿಕೆ  

ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.


ಆದ್ದರಿಂದ ನೀವು ನಿಮ್ಮ ದುರ್ನಡತೆಯ ಫಲಗಳನ್ನು ಅನುಭವಿಸುವಿರಿ. ನೀವು ಬೇರೆಯವರಿಗೆ ಮಾಡಿದ ಕುಯುಕ್ತಿಗಳನ್ನೇ ಹೊಂದುವಿರಿ.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’”


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


“ನಿನ್ನ ನಡತೆಯೂ ನಿನ್ನ ಕೃತ್ಯಗಳೂ ನಿನಗೆ ಈ ಕಷ್ಟವನ್ನು ತಂದವು. ನಿನ್ನ ದುಷ್ಟತನವೇ ನಿನ್ನ ಜೀವನವನ್ನು ಇಷ್ಟು ಕಷ್ಟಕರವನ್ನಾಗಿ ಮಾಡಿದೆ. ನಿನ್ನ ದುಷ್ಟತನವೇ ನಿನ್ನ ಮನಸ್ಸಿಗೆ ಆಳವಾದ ನೋವನ್ನು ಉಂಟುಮಾಡಿದೆ.”


ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.


ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.


ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ’” ಇದು ಯೆಹೋವನ ನುಡಿ.


“ಹೆಣಗಳನ್ನು ಹೂಳಿಟ್ಟು ದೇಶವನ್ನು ಶುದ್ಧಗೊಳಿಸುವ ಕೆಲಸಗಾರರಿಗೆ ಖಾಯಂ ಕೆಲಸ ಕೊಡಲಾಗುವದು. ಅವರು ದೇಶದಲ್ಲೆಲ್ಲಾ ಹೆಣಗಳನ್ನು ಹುಡುಕಿ ತೆಗೆಯುವರು. ಅವರಿಗೆ ಏಳು ತಿಂಗಳು ಬೇಕಾಗುವುದು.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.


ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು