Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:3 - ಪರಿಶುದ್ದ ಬೈಬಲ್‌

3 ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:3
23 ತಿಳಿವುಗಳ ಹೋಲಿಕೆ  

ದಾವೀದನು ಆಲೀವ್ ಮರಗಳ ದಿಣ್ಣೆಯನ್ನೇರಿದನು. ಅವನು ಗೋಳಾಡುತ್ತಿದ್ದನು. ಅವನು ತಲೆಯ ಮೇಲೆ ಮುಸುಕೆಳೆದುಕೊಂಡು ಬರಿಗಾಲಿನಲ್ಲಿ ನಡೆದುಕೊಂಡು ಹೋದನು. ದಾವೀದನ ಜೊತೆಯಲ್ಲಿದ್ದ ಅವನ ಜನರೆಲ್ಲರೂ ತಲೆಯ ಮೇಲೆ ಮುಸುಕು ಹಾಕಿಕೊಂಡು ಗೋಳಾಡುತ್ತಾ ದಾವೀದನೊಂದಿಗೆ ಹೋದರು.


ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ!


ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಎಂದು ಹೇಳಿದನು. ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: “‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.


ಹೀಗೆ ಎರಡು ಮೂರು ಪಟ್ಟಣಗಳ ನಿವಾಸಿಗಳು ನೀರಿಗಾಗಿ ಇನ್ನೊಂದು ಪಟ್ಟಣಕ್ಕೆ ಕಷ್ಟಪಟ್ಟು ಕೊಂಡುಹೋದರು. ಆದರೆ ಅಲ್ಲಿ ಎಲ್ಲರಿಗೂ ನೀರು ದೊರಕಲಿಲ್ಲ. ಹೀಗಾದರೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇವು ಯೆಹೋವನ ನುಡಿಗಳು.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ಕಾಡುಪ್ರಾಣಿಗಳೂ ಬಾಯಾರಿ ನಿನ್ನ ಕಡೆಗೆ ನೋಡುತ್ತಿವೆ. ನೀರಿನ ತೊರೆಗಳು ಬತ್ತಿಹೋಗಿವೆ. ನೀರೇ ಇಲ್ಲ. ನಮ್ಮ ಹಸಿರು ಹುಲ್ಲುಗಾವಲು ಬೆಂಕಿಯ ದೆಸೆಯಿಂದ ಮರುಭೂಮಿಯಾಗಿರುತ್ತದೆ.


ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


ಭೂಮಿಗೆ ಮಳೆ ಬೀಳುವದಿಲ್ಲ. ಯಾರೂ ಬಿತ್ತನೆಗಾಗಿ ಭೂಮಿಯನ್ನು ಉಳುವದಿಲ್ಲ. ರೈತರು ಎದೆಗುಂದುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.


ನನ್ನ ಶತ್ರುಗಳಿಗೆ ಅವಮಾನವೇ ವಸ್ತ್ರವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ.


ನೀರು ಸಿಗುವುದೆಂದು ಅವರು ನಂಬಿಕೊಂಡಿದ್ದರೂ ಅವರಿಗೆ ನಿರಾಶೆಯಾಯಿತು.


ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.


ಅಲ್ಲಿಯೂ ಮಳೆಯಿಲ್ಲದ್ದರಿಂದ, ಸ್ವಲ್ಪಕಾಲದ ಬಳಿಕ ಹಳ್ಳವೂ ಬತ್ತಿಹೋಯಿತು.


ರಾಜನು ತನ್ನ ಮುಖವನ್ನು ಮುಚ್ಚಿಕೊಂಡಿದ್ದನು. ರಾಜನು, “ನನ್ನ ಮಗನೇ, ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ” ಎಂದು ಗಟ್ಟಿಯಾಗಿ ಅಳುತ್ತಿದ್ದನು.


ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”


ನೀನು ಪಾಪ ಮಾಡಿದ್ದರಿಂದ ಮಳೆ ಬರಲಿಲ್ಲ; ಹಿಂಗಾರು ಮಳೆಯೂ ಆಗಲಿಲ್ಲ. ನಿನ್ನ ಮುಖದ ಮೇಲೆ ಇನ್ನೂ ವೇಶ್ಯೆಯ ಕಳೆಯೇ ಇದೆ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ನಾಚಿಕೆಯೂ ಆಗುವುದಿಲ್ಲ.


ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.


ಎಳೆಕೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.


ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.


ರಾಜನೂ ಸರ್ವಶಕ್ತನೂ ಆಗಿರುವ ಯೆಹೋವನನ್ನು ಆರಾಧಿಸಲು ಭೂಲೋಕದ ಕುಟುಂಬಗಳ ಯಾವ ಜನರಾದರೂ ಜೆರುಸಲೇಮಿಗೆ ಹೋಗದಿದ್ದಲ್ಲಿ ಅವರ ರಾಜ್ಯಗಳಲ್ಲಿ ಮಳೆಗೆರೆಯುವದು ನಿಂತುಹೋಗುವದು.


“ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗರೆಯುವುದನ್ನು ನಿಲ್ಲಿಸಿದೆನು. ಆದ್ದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು