Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:2 - ಪರಿಶುದ್ದ ಬೈಬಲ್‌

2 ‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ : ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಅವರಿಗೆ - ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ, ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:2
18 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.


ಆಗ ನಾನು, “ಸರಿ, ನಾನು ನಿಮ್ಮನ್ನು ಇನ್ನು ನೋಡಿಕೊಳ್ಳುವದಿಲ್ಲ. ಹೋಗಿಬಿಡುತ್ತೇನೆ” ಅಂದೆನು. ಸಾಯಲು ಮನಸ್ಸುಳ್ಳವುಗಳನ್ನು ಸಾಯಲುಬಿಟ್ಟೆನು. ನಾಶವಾಗಲು ಮನಸ್ಸುಳ್ಳವುಗಳನ್ನು ನಾಶವಾಗಲು ಬಿಟ್ಟೆನು. ಅಳಿಯದೆ ಉಳಿದವುಗಳು ಪರಸ್ಪರ ನಾಶಮಾಡಿಕೊಳ್ಳುವವು.


ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.


ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


“ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಯಾವ ನಗರಕ್ಕೂ ಆಗಿಲ್ಲ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.


“ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”


ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು.


‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’


“‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು