Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:5 - ಪರಿಶುದ್ದ ಬೈಬಲ್‌

5 “ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಬಡುಕೊಳ್ಳುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:5
15 ತಿಳಿವುಗಳ ಹೋಲಿಕೆ  

ಜೆರುಸಲೇಮಿಗೆ ತೊಂದರೆಗಳು ಎರಡು ಗುಂಪುಗಳಾಗಿ ಬಂದವು: ಲೂಟಿ ಮತ್ತು ಕೊರತೆ; ಕ್ಷಾಮ ಮತ್ತು ಖಡ್ಗ. ನೀನು ಸಂಕಟ ಅನುಭವಿಸುವಾಗ ಯಾರೂ ನಿನಗೆ ಸಹಾಯ ಮಾಡಲಿಲ್ಲ. ಯಾರೂ ನಿನಗೆ ಕರುಣೆ ತೋರಿಸಲಿಲ್ಲ.


ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ಅವಮಾನವು ನನ್ನನ್ನು ಜಜ್ಜಿಹಾಕಿದೆ! ನಾನು ನಾಚಿಕೆಯಿಂದ ಸಾಯುವಂತಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ, ಆದರೆ ಯಾರೂ ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ, ಆದರೆ ಯಾರೂ ಸಿಗಲಿಲ್ಲ.


ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.


ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’”


“ನನ್ನ ಸ್ನೇಹಿತರೇ, ಕರುಣಿಸಿರಿ, ನೀವಾದರೂ ನನ್ನನ್ನು ಕರುಣಿಸಿರಿ. ದೇವರ ಹಸ್ತವು ನನ್ನನ್ನು ಹೊಡೆದಿದೆ.


ಆದ್ದರಿಂದ ನಾಬಾಲನ ಸಂಗಡ ಮಾತನಾಡಲು ದಾವೀದನು ಹತ್ತು ಜನ ಯುವಕರನ್ನು ಕರೆದು ಅವರಿಗೆ, “ಕರ್ಮೆಲಿಗೆ ಹೋಗಿ ನಾಬಾಲನನ್ನು ಕಂಡುಹಿಡಿಯಿರಿ. ಅವನಿಗೆ ನನ್ನ ಪರವಾಗಿ ಶುಭವನ್ನು ಕೋರಿ.”


ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.


ಈ ಮೂವರೂ ನಿನ್ನ ಕ್ಷೇಮವನ್ನು ವಿಚಾರಿಸುತ್ತಾರೆ. ಅವರು ನಿನಗೆ ಎರಡು ರೊಟ್ಟಿಗಳನ್ನು ಕೊಡುತ್ತಾರೆ. ನೀನು ಆ ಎರಡು ರೊಟ್ಟಿಗಳನ್ನು ಅವರಿಂದ ತೆಗೆದುಕೊಳ್ಳುವೆ.


ಅವರು ಯೌವನಸ್ಥನಾದ ಲೇವಿಯು ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು. ತರುಣನ ಯೋಗಕ್ಷೇಮವನ್ನು ಕೇಳಿದರು.


ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.


ಚೀಯೋನು ತನ್ನ ಕೈಗಳನ್ನು ಚಾಚಿದಳು. ಅವಳನ್ನು ಸಂತೈಸುವವರೇ ಇರಲಿಲ್ಲ. ಯಾಕೋಬನಿಗೆ ವೈರಿಗಳಾಗಬೇಕೆಂದು ಅವನ ನೆರೆಹೊರೆಯವರಿಗೆ ಯೆಹೋವನು ಆಜ್ಞಾಪಿಸಿದ್ದನು. ಜೆರುಸಲೇಮ್ ಒಂದು ಹೊಲಸು ವಸ್ತುವಾಗಿದ್ದಾಳೆ. ಆ ವೈರಿಗಳ ಮಧ್ಯದಲ್ಲಿ ಅವಳು ಒಂದು ಹೊಲಸು ವಸ್ತುವಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು