Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:7 - ಪರಿಶುದ್ದ ಬೈಬಲ್‌

7 ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಜನರನ್ನು ದೇಶದ ಉಕ್ಕಡಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು; ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ನನ್ನ ಜನರನ್ನು ನಾಶಮಾಡಿ ಅವರಿಗೆ ಶೋಕವನ್ನು ನೀಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು, ಹಿಂದಿರುಗದೆ ಇದ್ದುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:7
21 ತಿಳಿವುಗಳ ಹೋಲಿಕೆ  

ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ಬಾಬಿಲೋನನ್ನು ತೂರುವದಕ್ಕಾಗಿ ನಾನು ವಿದೇಶಿಯರನ್ನು ಕಳಿಸುವೆನು. ಅವರು ಬಾಬಿಲೋನನ್ನು ತೂರುವರು. ಆ ಜನರು ಬಾಬಿಲೋನನ್ನು ಬರಿದುಗೊಳಿಸುವರು. ಸೈನಿಕರು ನಗರವನ್ನು ಮುತ್ತುವರು; ಅಪಾರ ವಿನಾಶ ಸಂಭವಿಸುವದು.


ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.


ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.


ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.


ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.


ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.


ಯೆಹೋವನು ಹೀಗೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.


ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು.


ನಿಮಗೆ ಗಂಡುಹೆಣ್ಣು ಮಕ್ಕಳು ಹುಟ್ಟುವರು. ಆದರೆ ಅವರು ನಿಮ್ಮೊಂದಿಗೆ ಇರುವುದಿಲ್ಲ. ಅವರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


“ನಿಮ್ಮ ಗಂಡುಹೆಣ್ಣು ಮಕ್ಕಳನ್ನು ಬೇರೆಯವರು ಎತ್ತಿಕೊಂಡು ಹೋಗುವರು. ನೀವು ಹಗಲುರಾತ್ರಿ ನಿಮ್ಮ ಮಕ್ಕಳಿಗಾಗಿ ಹುಡುಕಾಡುವಿರಿ. ಹುಡುಕಾಡುತ್ತಾ ನಿಮ್ಮ ಕಣ್ಣುಗಳು ಕಂಗೆಡುವವು; ಆದರೆ ಅವರು ನಿಮಗೆ ದೊರಕುವುದಿಲ್ಲ. ಯೆಹೋವನು ನಿಮಗೆ ಸಹಾಯ ಮಾಡುವುದಿಲ್ಲ.


ನಿಮಗೆ ಹೆಚ್ಚು ಮಕ್ಕಳಿಲ್ಲದಂತೆ ಮಾಡುವನು. ನಿಮ್ಮ ಹೊಲಗಳನ್ನು ಶಪಿಸಿ ನಿಮಗೆ ಹೆಚ್ಚು ಬೆಳೆಯಾಗದಂತೆ ಮಾಡುವನು. ನಿಮ್ಮ ಪಶುಪ್ರಾಣಿಗಳನ್ನು ಶಪಿಸಿ ಅವುಗಳು ಮರಿಗಳನ್ನು ಈಯದಂತೆ ಮಾಡುವನು. ಆತನು ನಿಮ್ಮ ಎಲ್ಲಾ ಮರಿಗಳನ್ನೂ ಕರುಗಳನ್ನೂ ಶಪಿಸುವನು.


ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನ್ನು ನಿನ್ನ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವೆ. ಅವರ ಮಕ್ಕಳನ್ನು ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.”


ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು